Breaking News

ಯುವಕರ ಬೈಕ್​ ವೀಲಿಂಗ್‌ನಿಂದ ಶಿಕ್ಷಕಿಗೆ ಗಂಭೀರ ಗಾಯ; ICUನಲ್ಲಿ ಜೀವನ್ಮರಣದ ಹೋರಾಟ

Spread the love

ಮೈಸೂರು: ಯುವಕರ ಅಪಾಯಕಾರಿ ಬೈಕ್ ವೀಲಿಂಗ್ ಕ್ರೇಜ್‌ನಿಂದಾಗಿ ಶಿಕ್ಷಕಿಯೋರ್ವರು ಗಂಭೀರವಾಗಿ ಗಾಯಗೊಂಡು ಇದೀಗ ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

ಮೈಸೂರಿನಲ್ಲಿ ಘಟನೆ ನಡೆದಿದೆ. ಪೊಲೀಸ್ ಪಬ್ಲಿಕ್ ಸ್ಕೂಲ್ ವಿಜ್ಞಾನ ಶಿಕ್ಷಕಿ ಎಚ್.ಬಿ.ಅನಿತಾ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜುಲೈ 18ರಂದು ಶಿಕ್ಷಕಿ ಶಾಲೆಯಿಂದ ಮನೆಗೆ ತೆರಳುತ್ತಿದ್ದರು. ಗಾಯತ್ರಿಪುರಂ ಚರ್ಚ್ ಸಮೀಪ ಮೂವರಿದ್ದ ಕೆಟಿಎಂ ಬೈಕ್ ವೇಗವಾಗಿ ಬಂದು ಶಿಕ್ಷಕಿ ಸಂಚರಿಸುತ್ತಿದ್ದ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಶಿಕ್ಷಕಿಯ ತಲೆಗೆ ತೀವ್ರ ಸ್ವರೂಪದ ಗಾಯವಾಗಿದ್ದು, ರಕ್ತಸ್ರಾವದಿಂದ ಪ್ರಜ್ಞೆ ತಪ್ಪಿ ರಸ್ತೆಗೆ ಬಿದ್ದಿದ್ದರು. ತಕ್ಷಣವೇ ಸಾರ್ವಜನಿಕರು ಅಪಲೋ ಆಸ್ಪತ್ರೆಗೆ ದಾಖಲಿಸಿದ್ದರು. ಸವಾರರು ಸ್ಥಳದಲ್ಲೇ ಬೈಕ್‌ ಬಿಟ್ಟು ಪರಾರಿಯಾಗಿದ್ದರು.

ಯುವಕರು ವೀಲಿಂಗ್ ಮಾಡಿದ ಬೈಕ್ ಮೈಸೂರಿನ ಕುರುಬರಹಳ್ಳಿಯ ಆದಿತ್ಯ ಎಂಬವರ ಹೆಸರಿನಲ್ಲಿದೆ. ಗಾಯಾಳು ಶಿಕ್ಷಕಿಯು ಅಪೊಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮೈಸೂರು ನಗರ ಸಿದ್ದಾರ್ಥ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ