Breaking News

ಬಸ್​ನಲ್ಲಿ ಮೂರ್ಛೆ ಹೋದ ಪ್ರಯಾಣಿಕ: ಆಸ್ಪತ್ರೆಗೆ ಸೇರಿಸಿ ಪ್ರಾಣ ಕಾಪಾಡಿದ ಚಾಲಕ – ನಿರ್ವಾಹಕ.

Spread the love

ತುಮಕೂರು : ಚಲಿಸುತ್ತಿದ್ದ ಬಸ್​ನಲ್ಲಿ ಮೂರ್ಛೆ ಹೋದ ಪ್ರಯಾಣಿಕನನ್ನು ತಕ್ಷಣ ಚಿಕಿತ್ಸೆ ಕೊಡಿಸಲು ಬಸ್​ನ ಚಾಲಕ ಮತ್ತು ನಿರ್ವಾಹಕ ಸಮಯ ಪ್ರಜ್ಞೆ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಬಸ್​ನಲ್ಲಿಯೇ ಮೂರ್ಛೆ ತಪ್ಪಿ ಬಿದ್ದು ಪ್ರಯಾಣಿಕನಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಪ್ರಯಾಣಿಕರ ಸಮೇತ ಬಸ್​ ಅನ್ನು ಆಸ್ಪತ್ರೆ ಕಡೆ ಓಡಿಸಿದ ಚಾಲಕ, ಪ್ರಶಂಸೆಗೆ ಪಾತ್ರರಾಗಿದ್ದಾರೆ.

ತುಮಕೂರಿನ ತಿಪಟೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಆಂಬ್ಯುಲೆನ್ಸ್ ರೀತಿ ಬಸ್ ಚಲಾಯಿಸಿ ಡ್ರೈವರ್​ ಪ್ರಯಾಣಿಕನ ಪ್ರಾಣ ಉಳಿಸಿದ್ದಾರೆ. ಶಿವಮೊಗ್ಗದಿಂದ-ಬೆಂಗಳೂರಿಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಇದಾಗಿತ್ತು. ಈ ವೇಳೆ, ಬಸ್ ತಿಪಟೂರು ನಿಲ್ದಾಣ ತಲುಪಿದಾಗ ಉಸಿರಾಡಲು ಸಾಧ್ಯವಾಗದೇ ಪ್ರಯಾಣಿಕ ಮೂರ್ಛೆ ತಪ್ಪಿದ್ದರು. ಬಿದ್ದ ರಭಸಕ್ಕೆ ಮೂಗಿನಲ್ಲಿ ರಕ್ತ ಸ್ರಾವವಾಗಿತ್ತು. ಕೂಡಲೇ ಗಮನಿಸಿದ ನಿರ್ವಾಹಕ ಓಂಕಾರ್ ಚಾಲಕನಿಗೆ ತಿಳಿಸಿದ್ದಾರೆ.

ಚಾಲಕ-ನಿರ್ವಾಹಕನ ಮಾನವೀಯತೆಗೆ ಸಾರ್ವಜನಿಕರಿಂದ ಪ್ರಶಂಸೆ: ಕೂಡಲೇ ಚಾಲಕ ಪ್ರಕಾಶ್ ಬಸ್ ಅನ್ನು ತಿಪಟೂರು ತಾಲೂಕು ಆಸ್ಪತ್ರೆಗೆ ಚಲಾಯಿಸಿದ್ದಾರೆ. ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ಸೇರಿಸಿದ ಪರಿಣಾಮ ಈಶ್ವರ್ ರೆಡ್ಡಿ ಪ್ರಾಣ ಉಳಿದಿದೆ. ಚಾಲಕ- ನಿರ್ವಾಹಕರ ಮಾನವೀಯತೆಯನ್ನು ಸಾರ್ವಜನಿಕರು ಪ್ರಶಂಸಿಸಿದ್ದಾರೆ.

ಬಸ್​​ ಚಲಾಯಿಸುವಾಗ ಮೂರ್ಛೆ ಬಂದು ಒದ್ದಾಡಿದ ಚಾಲಕ: ಬಸ್​​ ಚಲಾಯಿಸುವಾಗ ಚಾಲಕನಿಗೆ ಮೂರ್ಛೆರೋಗ ಬಂದ ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ಮುಂದಿದ್ದ ವಾಹನಕ್ಕೆ (ಜನವರಿ 23-2023) ಗುದ್ದಿತ್ತು. ಕೂಡಲೇ ಗಮನಿಸಿದ ​​​ಮತ್ತೋರ್ವ ಚಾಲಕ ಬಸ್​ ತಡೆದು ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದರು.

ಎರಡು ದ್ವಿಚಕ್ರ ವಾಹನಗಳು ಜಖಂ: ಧಾರವಾಡದಿಂದ ಹುಬ್ಬಳ್ಳಿಗೆ ಬರುತ್ತಿದ್ದ ವೇಳೆ ಉಣಕಲ್​​ ಬಳಿ ಬೇಂದ್ರೆ ಸಾರಿಗೆ ಬಸ್​ ಚಾಲಕನಿಗೆ ಮೂರ್ಛೆರೋಗ ಬಂದಿತ್ತು. ಪರಿಣಾಮ ಬಸ್​ ನಿಯಂತ್ರಣ ತಪ್ಪಿ ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಆಗ ಅಲ್ಲೇ ಇದ್ದ ಮತ್ತೋರ್ವ ಚಾಲಕ ಬಸ್​​​ ತಡೆದು ನಿಲ್ಲಿಸಿದ್ದರು. ಘಟನೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಜಖಂಗೊಂಡಿದ್ದವು. ಇತ್ತ ಪಿಡ್ಸ್​​​ ಬಂದು ಅಸ್ವಸ್ಥಗೊಂಡಿದ್ದ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ