Breaking News

ರಾಜಕಾರಣದಲ್ಲಿ ಎಲ್ಲರೂ ಸಮಾನರು, ಸಮುದಾಯವನ್ನು ತುಳಿಯುವ ಕೆಲಸ ಕಾಂಗ್ರೆಸ್ ಮಾಡುವುದಿಲ್ಲ: ಡಿ.ಕೆ.ಶಿ

Spread the love

ಬೆಂಗಳೂರು : “ರಾಜಕಾರಣದಲ್ಲಿ ಎಲ್ಲರೂ ಸಮಾನರು, ಯಾವ ಅಸಮಾಧಾನವೂ ಇಲ್ಲ. ಯಾವ ಸಮುದಾಯವನ್ನೂ ತುಳಿಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಮಾಡುವುದಿಲ್ಲ. ಬಿ.ಕೆ.ಹರಿಪ್ರಸಾದ್ ಅವರು ಏನು ಹೇಳಿದ್ದಾರೆ ಎಂಬುದು ನನಗೆ ಸರಿಯಾಗಿ ಗೊತ್ತಿಲ್ಲ. ಹೀಗಾಗಿ, ಆ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಆ ಬಗ್ಗೆ ವಿಚಾರಿಸಿ ಮಾತನಾಡುತ್ತೇನೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

 

ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಸಚಿವರು ಮಾತನಾಡಿದರು. ಇದೇ ವೇಳೆ ಹಾಲಿನ ಬೆಲೆ ಏರಿಕೆ ಕುರಿತಾದ ಪ್ರಶ್ನೆಗೆ ಉತ್ತರಿಸಿ, “ನಾನು ರೈತನ ಮಗ, ಪಶು ಆಹಾರ, ಹಾಲಿನ ಉತ್ಪಾದನಾ ವೆಚ್ಚ ಜಾಸ್ತಿಯಾಗಿದೆ. ಹೀಗಾಗಿ, 5 ರೂಪಾಯಿ ಹೆಚ್ಚಳ ಮಾಡಬೇಕು ಎಂದು ನಾನೇ ದೊಡ್ಡಬಳ್ಳಾಪುರದಲ್ಲಿ ಭಾಷಣ ಮಾಡಿದ್ದೆ. ಹಾಲು ಒಕ್ಕೂಟದವರು ಸಹ ಪ್ರಸ್ತಾಪ ಮಾಡಿದ್ದರು. ಈ ಕುರಿತು ಚರ್ಚಿಸಿ 3 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹೆಚ್ಚಿನ ಹಣ ರೈತರಿಗೆ ಸೇರಬೇಕು. ಈಗಲೂ ಸಹ ನಷ್ಟವಾಗುತ್ತಿದೆ. ಆದರೂ ಸರಿದೂಗಿಸಿಕೊಂಡು ಹೋಗಬೇಕಲ್ಲ?. ಬೆಲೆ ಹೆಚ್ಚಳ ಎಂದು ಬಿಜೆಪಿಯವರು ಟೀಕೆ ಮಾಡಲಿ, ಅವರು ಇರುವುದೇ ಟೀಕೆ ಮಾಡೋಕೆ” ಎಂದರು.


Spread the love

About Laxminews 24x7

Check Also

ಗ್ರಾಪಂ ಅಭಿವೃದ್ಧಿಗೆ ಸದಸ್ಯರ ಸಹಕಾರ ಅತ್ಯಗತ್ಯ

Spread the loveಆನೇಕಲ್​ : ಪಂಚಾಯಿತಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಎಲ್ಲರೂ ನೀಡಿದ ಸಹಕಾರ ಕಾರಣ ಎಂದು ಹೆನ್ನಾಗರ ಗ್ರಾಪಂ ಅಧ್ಯಕ್ಷ ಕೆ.ವಿನಯ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ