Breaking News

ಆನ್​ಲೈನ್​ ಗೇಮ್​ನಲ್ಲಿ ₹58 ಕೋಟಿ ಕಳೆದುಕೊಂಡ ಉದ್ಯಮಿ: ಆರೋಪಿ ಮನೆಯಿಂದ ₹17 ಕೋಟಿ ಹಣ, ಚಿನ್ನದ ಬಿಸ್ಕೆಟ್​ ವಶ

Spread the love

ನಾಗಪುರ (ಮಹಾರಾಷ್ಟ್ರ) : ಇತ್ತೀಚಿನ ದಿನಗಳಲ್ಲಿ ಆನ್​ಲೈನ್​ ಗೇಮ್‌ಗಳನ್ನು ಆಡಿ ಹಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಆರೋಪಿಗಳು ಅಮಾಯಕರಿಗೆ ಮೋಸ ಮಾಡಿ ಹಣ ಗಳಿಸುತ್ತಿದ್ದಾರೆ.

ಹೆಚ್ಚು ಹಣ ಮಾಡುವ ಆಸೆಗೆ ಬಿದ್ದು, ಇದ್ದ ಹಣವನ್ನು ಕಳೆದುಕೊಂಡು ಜನರು ಬೀದಿಗೆ ಬೀಳುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಖ್ಯಾತ ಉದ್ಯಮಿಯೊಬ್ಬರು ಆನ್​ಲೈನ್​ ಗೇಮಿನ ಗೀಳಿಗೆ ಬಿದ್ದು 58 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ನಾಗಪುರ ಜಿಲ್ಲೆಯ ಉದ್ಯಮಿಯೊಬ್ಬರು ಆನ್​ಲೈನ್​ ಗೇಮಿಂಗ್​ ಮೂಲಕ ಹೆಚ್ಚು ಹಣ ಸಂಪಾದಿಸುವ ವಂಚನೆಯ ಜಾಲದಲ್ಲಿ ಸಿಲುಕಿ ಕೋಟಿಗಟ್ಟಲೆ ಹಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಉದ್ಯಮಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಉದ್ಯಮಿ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಸಂತ್ರಸ್ತ ಉದ್ಯಮಿಯು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಆನ್​ಲೈನ್​ ಗೇಮ್​ನ ಚಟಕ್ಕೆ ಬಿದ್ದಿದ್ದರು. ಆನ್​ಲೈನ್​ನಲ್ಲಿ ಆಟ ಆಡುವ ಮೂಲಕ ಉದ್ಯಮಿಯು ನವೆಂಬರ್​ 2021ರಿಂದ 2023ರವರೆಗೆ 58 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಈ ಸಂಬಂಧ ಆರೋಪಿ ಅನಂತ್​ ನವರಥನ್​ ಜೈನ್​ ಎಂಬವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಗೊಂಡಿಯಾ ಜಿಲ್ಲೆಯಲ್ಲಿರುವ ಆರೋಪಿ ಅನಂತ್​ ಮನೆ ಮೇಲೆ ದಾಳಿ ನಡೆಸಿದ್ದಾರೆ. ​4 ಕೆಜಿ ಚಿನ್ನಾಭರಣ ಮತ್ತು 17 ಕೋಟಿ ನಗದು ವಶಕ್ಕೆ ಪಡೆದಿದ್ದಾರೆ. ಆರೋಪಿ ಅನಂತ್​ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

 


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ