Breaking News

ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮೂಲಕ ಚಿನ್ನಾಭರಣ ಕಳ್ಳತನ

Spread the love

ಬೆಂಗಳೂರು: ಒಂದೂವರೆ ವರ್ಷಗಳ ಹಿಂದೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು ಮನೆ ಗೆಲಸ ಮಾಡುತ್ತಿದ್ದ ಆರೋಪಿತೆಯನ್ನ ಬಂಧಿಸಿದ್ದಾರೆ.

ಹಲವು ಬಾರಿ‌ ನೋಟೀಸ್ ನೀಡಿ ಸುಳ್ಳು ಪತ್ತೆ ಪರೀಕ್ಷೆಗೆ (ಪಾಲಿಗ್ರಪಿ) ಒಳಪಡಿಸಿದರೂ ಗುಟ್ಟು ಬಿಟ್ಟುಕೊಡದ ಕಿಲಾಡಿ ಮಹಿಳಾ ಆರೋಪಿ ಬ್ರೈನ್ ಮ್ಯಾಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾಳೆ. ಪರೀಕ್ಷೆ ವೇಳೆ ನೀಡಿದ ಸುಳಿವು ಆಧರಿಸಿ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗದಗ ಜಿಲ್ಲೆಯ ಜನತಾ ಕಾಲೊನಿಯ ನಿವಾಸಿ ಅನ್ನಪೂರ್ಣ ಬಂಧಿತ ಆರೋಪಿ. ಮಹಾಲಕ್ಷ್ಮೀ‌ ಲೇಔಟ್​ನಲ್ಲಿರುವ ಉದ್ಯಮಿ ಹೊನ್ನಾಚಾರಿ ಎಂಬುವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. 2021 ರಿಂದ 2022 ಜನವರಿಗೂ ಕೆಲಸ ಮಾಡಿದ್ದಳು. ಈ ಅವಧಿಯಲ್ಲಿ ಹಂತ-ಹಂತವಾಗಿ 10 ಲಕ್ಷ ರೂ ಮೌಲ್ಯದ 250 ಗ್ರಾಂ ಚಿನ್ನಾಭರಣ ಮನೆಯಲ್ಲಿ ಕಳವು ಆಗಿತ್ತು. ಮನೆ ಕೆಲಸದಾಕೆ ಮೇಲೆ ಅನುಮಾನಗೊಂಡು ಆಕೆಯ ವಿರುದ್ಧ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ದೆಸೆಯಿಂದ ನಾಲ್ಕು ಬಾರಿ ನೋಟೀಸ್ ಕೊಟ್ಟು ವಿಚಾರಣೆ ನಡೆಸಿದರೂ, ಆರೋಪಿ ಮಹಿಳೆ ತಾನು ಚಿನ್ನ ಕದ್ದಿಲ್ಲ ಎಂದೇ ಪೊಲೀಸರ ಮುಂದೆ ಪ್ರತಿಪಾದಿಸಿದ್ದಳು.

ಎಲ್ಲ ಆಯಾಮಗಳಿಂದ ತನಿಖೆ ನಡೆಸಿ, ಮಹಿಳೆ ಎಷ್ಟು ತಾನು ಕದ್ದಿಲ್ಲ ಎಂದರೂ ಪೊಲೀಸರು ಮಹಿಳೆಯೇ ಕೃತ್ಯ ಎಸಗಿದ್ದಾರೆ ಎಂದು ಬಲವಾಗಿ ಶಂಕಿಸಿದ್ದರು‌. ಸಾಕ್ಷ್ಯಕ್ಕಾಗಿ ಶೋಧ ನಡೆಸಿದರೂ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಕಬ್ಬಿಣ್ಣದ ಕಡಲೆಯಂತಿದ್ದ ಪ್ರಕರಣ ಭೇದಿಸಲು ಪಣತೊಟ್ಟ ಪೊಲೀಸರು ನ್ಯಾಯಾಲಯದಿಂದ ಅನುಮತಿ ಪಡೆದು ಮಡಿವಾಳದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್​ಎಸ್​ಎಲ್) ಅನ್ನಪೂರ್ಣಳ ಒಪ್ಪಿಗೆ ಪಡೆದೇ ಆಕೆಯಲ್ಲಿ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆ ನಡೆಸಿದರೂ ಮಹಿಳೆ ಕೃತ್ಯದ ಬಗ್ಗೆ ಒಂಚೂರು ಬಾಯಿ ಬಿಟ್ಟಿರಲಿಲ್ಲ.

”ಮಾಮಾ” ಪದ ನೀಡಿದ ಸುಳಿವು ಆರೋಪಿ ಮುಳುವು: ಪಾಲಿಗ್ರಪಿ ಪರೀಕ್ಷೆ ನಡೆಸಿ ವಿಫಲವಾದರೂ ಕಂಗೆಡದೇ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ನಡೆಸಲು ತೀರ್ಮಾನಿಸಿದ ಪೊಲೀಸರು ನ್ಯಾಯಾಲಯದಿಂದ ಅನುಮತಿ ಪಡೆದು ಅನ್ನಪೂರ್ಣಳನ್ನ ಪರೀಕ್ಷೆಗೆ ಒಳಪಡಿಸಿದರು


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ