Breaking News

ಥಣಿಯಲ್ಲಿ ಮನೆ ಬಿದ್ದು ಯುವಕ; ವಿಜಯನಗರದಲ್ಲಿ ಗೋಡೆ ಕುಸಿದು ವೃದ್ಧೆ ಸಾವು

Spread the love

ಚಿಕ್ಕೋಡಿ: ಕಳೆದ ಹದಿನೈದು ದಿನಗಳಿಂದ ಸತತವಾಗಿ ಚಿಟಿಕೆ ಮಳೆ ಸುರಿಯುತ್ತಿದ್ದು ಮನೆಗೋಡೆ ಕುಸಿದು ಯುವಕ ಸಾವನ್ನಪ್ಪಿರುವ ಘಟನೆ ಅಥಣಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತರೆಂದು ಗುರುತಿಸಲಾಗಿದೆ. ತನ್ನ ತಂದೆ ತಾಯಿ ಹಾಗೂ ಸಹೋದರನನ್ನು ಮನೆಯಿಂದ ಹೊರಕಳಿಸಿ ತಾನು ಹೊರಬರುವ ಹೊತ್ತಿಗೆ ಹಠಾತ್ ಮೈಮೇಲೆ ಮಣ್ಣು, ಕಲ್ಲು ಬಿದ್ದು ಯುವಕ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಅಥಣಿ ಪಿಎಸ್‌ಐ ಹಾಗೂ ಸಿಪಿಐ ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮನೆಗೋಡೆ ಕುಸಿದು ವೃದ್ಧೆ ಸಾವು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ‌ ಕೋಗಳಿ ಗ್ರಾಮದಲ್ಲಿ ನಡೆದಿದೆ. ಕೋಗಳಿ ಗ್ರಾಮದ ನಾಗಮ್ಮ (60) ಮೃತರೆಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಮನೆ ಗೋಡೆ ಕುಸಿದುಬಿದ್ದು ಗಂಭೀರ ಗಾಯಗೊಂಡಿದ್ದ ವೃದ್ಧೆಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು.

ರಾತ್ರಿ 10.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್​ನಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ. ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.


Spread the love

About Laxminews 24x7

Check Also

ಅಕ್ರಮ ಬೆಟ್ಟಿಂಗ್​ ಆರೋಪದಲ್ಲಿ ಬಂಧಿತನಾದ ಶಾಸಕ ವೀರೇಂದ್ರ ಪ್ರಕರಣದ ದಾಖಲೆ ಕೇಳಿ ಇಡಿ ಸಮನ್ಸ್​: ಅನಿಲ್ ಗೌಡ ಸಲ್ಲಿಸಿದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಬೆಂಗಳೂರು : ಅಕ್ರಮ ಬೆಟ್ಟಿಂಗ್​ ಆರೋಪದಲ್ಲಿ ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣದಲ್ಲಿ ಕೆಲ ದಾಖಲೆ ಒದಗಿಸುವಂತೆ ಇ.ಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ