Breaking News

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಒಪ್ಪಿಗೆ

Spread the love

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ನಂದಿನಿ ಹಾಲಿಗೆ 3 ರೂ. ಹೆಚ್ಚಳಕ್ಕೆ ಸಂಪುಟ ಸಭೆ ತೀರ್ಮಾನಿಸಿದೆ. ಕಳೆದ ವಾರ ಕೆಎಂಎಫ್ ಜೊತೆ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಾಲಿನ ದರ 3 ರೂ. ಹೆಚ್ಚಿಸಲು ನಿರ್ಧರಿಸಲಾಗಿತ್ತು.

ಈ ಸಂಬಂಧ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ಇದೀಗ ಸಚಿವ ಸಂಪುಟ ಸಭೆಯಲ್ಲಿ ದರ ಏರಿಕೆಗೆ ತೀರ್ಮಾನಿಸಲಾಗಿದೆ. ಆ ಮೂಲಕ ಆಗಸ್ಟ್ 1ರಿಂದ ಹಾಲಿನ ದರ 3 ರೂ. ಹೆಚ್ಚಳವಾಗಲಿದೆ.

ಅಕ್ರಮ ಕಲ್ಲು ಗಣಿಗಾರಿಕೆಗೆ ದಂಡ ವಸೂಲಿಗೆ ತೀರ್ಮಾನ: ಕಲ್ಲುಗಣಿ ಗುತ್ತಿಗೆ ಪ್ರದೇಶದಲ್ಲಿ ಒತ್ತುವರಿ ಮಾಡಿದಂತಹ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆಯನ್ನು ಮಾಡಿ ಹೆಚ್ಚಿಗೆ ಉಪಖನಿಜ ತೆಗೆದು ಸಾಗಣೆ ಮಾಡಿದವರಿಗೆ, 6,105 ಕೋಟಿ ರೂ.‌ ದಂಡ ಮತ್ತು ರಾಯಧನ ವಸೂಲಿಗೆ ತೀರ್ಮಾನ ಮಾಡಲಾಗಿದೆ‌. ಒನ್ ಟೈಂ ಸೆಟ್ಲೆಮೆಂಟ್ ಮೂಲಕ ಹಣ ವಸೂಲಿಗೆ ತೀರ್ಮಾನಿಸಲಾಗಿದ್ದು, ಈ ಸಂಬಂಧ ಸಚಿವ ಸಂಪುಟ ಉಪ ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ