ಧಾರವಾಡ: ಅಂತರ್ಜಲ ಮರುಪೂರಣ ಆಗಬೇಕಾದ್ರೆ ಅದಕ್ಕೆ ಕೆರೆಗಳು ಬೇಕೇ ಬೇಕು.
ಪ್ರತಿ ಮಳೆಗಾಲ ಬಂದಾಗ ಕೆರೆಗಳು ತನ್ನೆಲ್ಲ ಜಾಗ ಆಕ್ರಮಿಸಿ ಮೈತುಂಬ ತುಂಬಿಕೊಳ್ಳಬೇಕು. ಅಷ್ಟೇ ತುಂಬಿ ತುಳುಕಿ ಕೋಡಿ ಹರಿಯಬೇಕು.
ಹೀಗೆ ಮೈದುಂಬಿ ಕೋಡಿ ಹರಿಯುತ್ತಿರೋ ಈ ಕೆರೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಅಂಚಿನಲ್ಲಿದೆ. ಸುತ್ತಲೂ ಹಸಿರ ಸಿರಿಯ ಗುಡ್ಡದ ನಡುವೆ ವಿಶಾಲವಾದ ಕೆರೆ. ಈ ಕೆರೆಯ ಎರಡು ಕಡೆಯಲ್ಲಿ ಕೋಡಿ ಹರಿಯುತ್ತೆ. ಪ್ರತಿ ಸಲ ಮಳೆಗಾಲ ಬಂದಾಗ ಇಷ್ಟು ಸುಂದರವಾಗಿ ಕಾಣುತ್ತೆ.
ಗ್ರಾಮಸ್ಥರು ನಿನ್ನೆ ಗುರುವಾರವಷ್ಟೇ ಈ ಕೆರೆಗೆ ಭಕ್ತಿಯ ಬಾಗಿನ ಅರ್ಪಿಸಿದ್ದಾರೆ. ಕೆರೆ ಕೋಡಿ ಬಿದ್ದಿದ್ದನ್ನು ಕಂಡ ನರೇಂದ್ರ ಗ್ರಾಮದ ಜನತೆ
ಸಂಭ್ರಮ ಪಟ್ಟಿದ್ದಾರೆ.