Breaking News

ಕುಡಿದ ಮತ್ತಿನಲ್ಲಿ ಎರಡು ತಂಡಗಳು ಕೈ ಕೈ ಮಿಲಾಯಿಸಿಕೊಂಡಿದ್ದು, ಜಗಳ ಅತಿರೇಕಕ್ಕೆ ಹೋಗಿ ಮೂರು ಬೈಕ್ ಗಳು ಭಸ್ಮ

Spread the love

ಉಡುಪಿ: ಕುಡಿದ ಮತ್ತಿನಲ್ಲಿ ಎರಡು ತಂಡಗಳು ಕೈ ಕೈ ಮಿಲಾಯಿಸಿಕೊಂಡಿದ್ದು, ಜಗಳ ಅತಿರೇಕಕ್ಕೆ ಹೋಗಿ ಮೂರು ಬೈಕ್ ಗಳು ಭಸ್ಮವಾಗಿದೆ.

ಉಡುಪಿ ತಾಲೂಕಿನ ಕೊಳಲಗಿರಿಯಲ್ಲಿ ಈ ಘಟನೆ ಸಂಭವಿಸಿದ್ದು, ಕೊಳಲಗಿರಿ ಸರ್ಕಾರಿ ಶಾಲೆ ಬಳಿ ಕಳೆದ ರಾತ್ರಿ ಜಗಳ ನಡೆದಿತ್ತು. ಉಪ್ಪೂರಿನ ಸೂರಜ್, ಅಲ್ವಿನ್, ಮೋಹಿತ್, ಬಾಲಕೃಷ್ಣ, ಮಣಿಕಂಠ ಹಾಗೂ ಪಪ್ಪು ಮದ್ಯಪಾನ ಮಾಡಿ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ಹೊಡೆದಾಟ ಆರಂಭವಾಗಿದೆ. ಗುಂಪಲ್ಲಿದ್ದ ದುಷ್ಕರ್ಮಿ ಬೈಕಿಗೆ ಬೆಂಕಿ ಹಚ್ಚಿದ್ದಾನೆ.ಗಲಾಟೆ ತಾರಕಕ್ಕೇರಿದ್ದು, ಪಕ್ಕದಲ್ಲಿದ್ದ ಎರಡು ಬೈಕ್ ಗೆ ಬೆಂಕಿ ಇಟ್ಟುಕೊಂಡಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಸ್ಥಳೀಯ ಮೂಲಗಳು ಮಾಹಿತಿ ನೀಡಿವೆ. ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಘಟನೆಗೆ ಸಂಬಂಧಿಸಿದಂತೆ ಐವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಕಿ ಹಚ್ಚಿದ ಜಗಳಗಂಟರು ಪೊಲೀಸ್ ವಶದಲ್ಲಿದ್ದಾರೆ.


Spread the love

About Laxminews 24x7

Check Also

ಗಂಡನನ್ನ ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟ ತಾಯಿ ಮಕ್ಕಳಿಗೆ ಜೀವಾವಧಿ ಶಿಕ್ಷೆ…

Spread the loveಉಡುಪಿ, : ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ