Breaking News

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್

Spread the love

ಬೆಂಗಳೂರು: ಪಿಎಚ್‌ಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.

ಆದಿ ಮಂಜುನಾಥ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕ ಸದಸ್ಯಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಹಲವು ಕೇಂದ್ರಗಳಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಪರೀಕ್ಷಾರ್ಥಿಗಳ ಗುರುತಿನ ಚೀಟಿ ಪರಿಶೀಲಿಸದೆ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕೆಲವು ವಿದ್ಯಾರ್ಥಿಗಳು ಮೊಬೈಲ್ ಅನ್ನು ಪರೀಕ್ಷಾ ಕೇಂದ್ರಕ್ಕೆ ಒಯ್ದಿದ್ದಾರೆ. ಮೊಬೈಲ್ ನಲ್ಲಿ ರಾಜಾರೋಷವಾಗಿ ಉತ್ತರಗಳನ್ನು ಹುಡುಕಿ ಬರೆದಿದ್ದಾರೆ. ಜತೆಗೆ ಈಗಾಗಲೇ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿಗಳೂ ಸಹ ಪರೀಕ್ಷಾ ಕೇಂದ್ರಗಳೊಳಗೆ ತೆರಳಿ ಅಕ್ರಮಗಳಿಗೆ ಸಹಾಯ ಮಾಡಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ