Breaking News

ಬೆಳಗಾವಿಯಲ್ಲಿ ಎಲ್ಲರೂ ಕನ್ನಡ ಉಳಸಿ ಬೆಳಸಬೇಕು.:ಅಶೋಕ ಚಂದರಗಿ,

Spread the love

ಬೆಳಗಾವಿ: ಬೆಳಗಾವಿ ನಗರದ ಕರ್ನಾಟಕ ರಾಜ್ಯೋತ್ಸವವೆಂದರೆ ಇಡೀ ದೇಶದಲ್ಲಿಯೇ ಹೆಚ್ಚು ವೈಭವ ಪೂರ್ಣವಾಗಿ ಆಚರಿಸುವ ರಾಜ್ಯೋತ್ಸವ.. ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ರಾಜ್ಯೋತ್ಸವಕ್ಕೆ ಬಂದಿದ್ದ ಎಲ್ಲರಿಗೂ ಹೋಳಿಗೆ ಊಟ ಬಡಿಸಿ, ಧಾರವಾಡ ಪೇಡ ಹಂಚಿ ಕನ್ನಡ ಉಳಿಸಿ, ಬೆಳೆಸಿ ಎಂದು ಕರೆ ನೀಡಿದರು.

ಈ ರಾಜ್ಯೋತ್ಸವದ ದಿನ ಹಲವಾರು ವರ್ಷಗಳಿಂದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ರಾಜ್ಯೋತ್ಸವಕ್ಕೆ ಬಂದಿರುವಂತಹ ಎಲ್ಲರಿಗೂ ಹೋಳಿಗೆ ಊಟ ಬಡಿಸುತ್ತಾರೆ. ರಾಜ್ಯೋತ್ಸವ ದಿನದಂದು 30ರಿಂದ 40 ಸಾವಿರ ಜನರಿಗೆ ಹೋಳಿಗೆ ಊಟ ಮಾಡಿಸುವ ಸ್ವಾಮೀಜಿಗೆ ಕಳೆದ ವರ್ಷದಿಂದ ಬೇಸರವಿದೆಯಂತೆ. ಕಳೆದ ವರ್ಷ ಅತಿವೃಷ್ಟಿಯಾದರೆ ಈ ವರ್ಷ ಕೊರೊನಾ ಹಾವಳಿಯಿಂದ ಹೀಗಾಗಿ ರಾಜ್ಯೋತ್ಸವ ಆಚರಣೆ ಕಳೆಗುಂದಿದೆ. ಸರಳವಾಗಿ ರಾಜ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಿದ ಸ್ವಾಮೀಜಿ, ಹೋಳಿಗೆ ಊಟ ಬಡಿಸಿ, ಪೇಡಾ ಹಂಚುವ ಪದ್ಧತಿ ಬಿಡಲಿಲ್ಲ.

ಚೆನ್ನಮ್ಮ ಸರ್ಕಲ್ ಗೆ ತೆರಳಿ ನೂರಾರು ಧ್ವಜ, ಶಾಲು ಖರೀದಿ ಮಾಡಿ ಕನ್ನಡ ವ್ಯಾಪಾರಸ್ಥರಿಗೆ ಪ್ರೋತ್ಸಾಹಿಸಿದ್ದರು. ಬಳಿಕ ವಿನಾಯಕ ನಗರದಲ್ಲಿ ಹುಕ್ಕೇರಿ ಹಿರೇಮಠ ದರಾಬೇಂದ್ರೆ ಯುವಕ ಮಂಡಳ, ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸ್ಥಳೀಯ ಸಂಘಟನೆಗಳ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಎಲ್ಲರಿಗೂ ಧಾರವಾಡ ಪೇಡಾ ಹಾಗೂ ಹೋಳಿಗೆ ಹಂಚಿ ಆಶಿರ್ವದಿಸಿದರು.

ಕನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷರಾದ ಅಶೋಕ ಚಂದರಗಿ, ಬೆಳಗಾವಿಯಲ್ಲಿ ಎಲ್ಲರೂ ಕನ್ನಡ ಉಳಸಿ ಬೆಳಸಬೇಕು. ನಮ್ಮ ನಾಡು ನುಡಿ ಬಗ್ಗೆ ಕಾಳಜಿ ಬೆಳೆಸುವುದು ನಮ್ಮ ಕರ್ತವ್ಯ ಎಂದರು.

ಇನ್ಕಮ್ ಟ್ಯಾಕ್ಸ್ಆಫೀಸರ್ ಸುರೇಶ್ ಬಾಬು, ರಾಜೇಶ್ ಎನ್ ಗುಡ್ ಮಟ್ಟಿ, ರಾಜು ಪಡಗೂರು ಶಿವಾನಂದ ಪಾಟೀಲ್, ಚನ್ನಬಸು ಪಾಟೀಲ್, ಪೃಥ್ವಿ ಸಿಂಗ್ ಪ್ರಕಾಶ್ ಬಿ ಬಿ ಹಾಗೂ ಶಂಕರ್ ಬಾಗೇವಾಡಿ ಇನ್ನೂ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ