ಮೈಸೂರು: ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಅಂತಾ ಶಾಸಜ ತನ್ವೀರ್ ಸೇಠ್ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರು ಆಗ್ತಾರೆ ಎನ್ನುವುದು ಮುಖ್ಯವಲ್ಲ. ಅಂಕಿ ಸಂಖ್ಯೆ ಮುಖ್ಯವಾಗುತ್ತದೆ. ಪಕ್ಷ ಅಧಿಕಾರಕ್ಕೆ ಬರಬೇಕು. ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಬಂದಾಗ ಅಂಕಿ ಸಂಖ್ಯೆ ಅನುಗುಣವಾಗಿ ಹೈಕಮಾಂಡ್ ತೀರ್ಮಾನ ಮಾಡತ್ತೆ. ನಾನು ಸಿಎಂ ಆಗುವ ಅರ್ಹತೆ ಇಟ್ಟುಕೊಂಡಿದ್ದೇನೆ ಎಂದರು.
ಜನರಿಂದ ಆಯ್ಕೆಯಾದವರು ಸಿಎಂ ಆಗುವ ಬಯಕೆ ಇಟ್ಕೊಳ್ಳಬಾರದು ಅಂತ ಏನಿಲ್ಲ. ಮುಖ್ಯಮಂತ್ರಿಗಳು ಯಾರಾಗ್ತಾರೆ ಅನ್ನೋದನ್ನ ಕಾಲ ಬಂದಾಗ ತೀರ್ಮಾನ ಮಾಡೋಣ. ನನ್ನ ಆಸೆ ಇಲ್ಲಿ ಮುಖ್ಯ ಅಲ್ಲ, ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಹೇಳಿದರು.