Breaking News
Home / ರಾಜಕೀಯ / ಎಸ್​ಸಿಪಿ, ಟಿಎಸ್​ಪಿ ಹಣದ ಮೇಲೆ ಕಾಂಗ್ರೆಸ್ ವಕ್ರದೃಷ್ಟಿ, ಸಿಎಂರಿಂದ ದಲಿತರ ಹಿತ ಕಡೆಗಣನೆ

ಎಸ್​ಸಿಪಿ, ಟಿಎಸ್​ಪಿ ಹಣದ ಮೇಲೆ ಕಾಂಗ್ರೆಸ್ ವಕ್ರದೃಷ್ಟಿ, ಸಿಎಂರಿಂದ ದಲಿತರ ಹಿತ ಕಡೆಗಣನೆ

Spread the love

ಬೆಂಗಳೂರು: ದಲಿತರು ಏನೇ ಮಾಡಿದರೂ ಮತ ನೀಡುತ್ತಾರೆ ಎಂದು ತಿಳಿದಿದ್ದೀರಾ ? ಮುಖ್ಯಮಂತ್ರಿಸಿದ್ದರಾಮಯ್ಯ(Siddaramaiah) ಅವರು ದಲಿತರ ಪರ ಅಂತ ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ದಲಿತರ ಹಿತ ಕಡೆಗಣಿಸಿದ್ದಾರೆ. ಎಸ್​ಸಿಪಿ (SCP), ಟಿಎಸ್​ಪಿ (TSP) ಹಣದ ಮೇಲೆ ಕಾಂಗ್ರೆಸ್ (Congress) ವಕ್ರದೃಷ್ಟಿ ಬಿದ್ದಿದೆ. ಸರ್ಕಾರ ಶಕ್ತಿ ಯೋಜನೆಗೆ ಎಸ್​ಸಿಪಿ, ಟಿಎಸ್​ಪಿ ಹಣ ಬಳಸುತ್ತಿದ್ದಾರೆ. ಬಸ್ ಹತ್ತುವವರನ್ನು ನೀವು ಎಸ್‌ಸಿ, ಎಸ್‌ಟಿ ಎಂದು ಕೇಳುತ್ತೀರಾ? ಯಾವ ಗೃಹಿಣಿ ಎಸ್‌ಸಿ, ಯಾವ ಗೃಹಿಣಿ ಎಸ್‌ಟಿ ಎಂದು ಗುರುತಿಸುತ್ತೀರಿ ? ದಲಿತರಿಗೆ 11 ಸಾವಿರ ಕೋಟಿ ರೂ. ಅನುದಾನ ಕೊರತೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ (Basavaraj Bommai) ವಾಗ್ದಾಳಿ ಮಾಡಿದರು.

ಎಸ್​ಸಿಪಿ, ಟಿಎಸ್​ಪಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದನ್ನು ವಿರೋಧಿಸಿ ಫ್ರೀಡಂ ಪಾರ್ಕ್​​ನಲ್ಲಿ ಇಂದು (ಜು.04) ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಈ ಹಣ ಇದ್ದಿದ್ದರೆ ಸಾವಿರಾರು ಗಂಗಾ ಕಲ್ಯಾಣ, ವಸತಿ ನಿಲಯ ನಿರ್ಮಾಣ ಮಾಡಬಹುದಿತ್ತು. ಮತ್ತು ಸ್ವಯಂ ಉದ್ಯೋಗ ಆಗುತ್ತಿತ್ತು. ಇದೀಗ ದಲಿತರಿಗೆ 11 ಸಾವಿರ ಕೋಟಿ ರೂ. ಕೊರತೆ ಆಗಿದೆ. ಸಾಲ ಮಾಡಿ ಗ್ಯಾರಂಟಿಗೆ ಹಣ ನೀಡಬೇಕಿತ್ತು. ದಲಿತರ ಹಣವನ್ನು ಗ್ಯಾರಂಟಿಗಳಲ್ಲಿ ಬಳಕೆ ಮಾಡಿ ಯೋಜನೆಗಳನ್ನು ಹೇಗೆ ಅದೇ ಸಮುದಾಯಕ್ಕೆ ತಲುಪಿಸ್ತೀರಿ? ಯಾರು ದಲಿತರು, ಯಾರು ದಲಿತರು ಅಲ್ಲ ಅಂತ ಗ್ಯಾರಂಟಿ ಫಲಾನುಭವಿಗಳಲ್ಲಿ ಹೇಗೆ ಗುರಿತಿಸುತ್ತೀರಿ ? ಸರ್ಕಾರ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಬೈಲಹೊಂಗಲದಲ್ಲಿ ಇದ್ದಾರೆ ‘ಹತ್ತು ರೂಪಾಯಿ’ ಡಾಕ್ಟ್ರು

Spread the love ಬೈಲಹೊಂಗಲ: ಇದು ದುಬಾರಿ ಯುಗ. ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶುಲ್ಕ ಜನರ ಕೈಸುಡುತ್ತಿದೆ. ಆದರೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ