ಭಯೋತ್ಪಾದಕ ನಂಟು ಇರುವ ಕಾರಣ ಎನ್​ಐಎ ಈ ಪ್ರಕರಣವನ್ನು ತನ್ನ ಸುಪರ್ದಿಗೆ ನೀಡುವಂತೆ ಕೇಳಿದೆ.

Spread the love

ನಾಗ್ಪುರ (ಮಹಾರಾಷ್ಟ್ರ): ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರಿಗೆ ಎರಡು ಬಾರಿ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ನಾಗ್ಪುರದಿಂದ ಮುಂಬೈಗೆ ವರ್ಗಾವಣೆ ಮಾಡುವಂತೆ ಕೋರಿ ಮುಂಬೈ ಹೈಕೋರ್ಟ್​ಗೆ ಎನ್​ಐಎ ಮನವಿ ಸಲ್ಲಿಸಿದೆ.

ಈ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಮುಂಬೈ ಹೈಕೋರ್ಟ್​ನ ನಾಗ್ಪುರ ಪೀಠದಲ್ಲಿ ಎನ್​ಐಎ ಮೇಲ್ಮನವಿ ಸಲ್ಲಿಸಿದೆ.

ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ಯ ಸರ್ಕಾರ ಹಾಗೂ ಪ್ರಮುಖ ಆರೋಪಿ ಜಯೇಶ್​ ಪೂಜಾರಿಗೆ ನೋಟಿಸ್​ ಜಾರಿ ಮಾಡಿದೆ. ಆಗಸ್ಟ್​ 30 ರೊಳಗೆ ಈ ನೋಟಿಸ್​ಗೆ ಉತ್ತರ ನೀಡುವಂತೆ ನೀರ್ದೇಶಿಸಿದೆ. ಈ ಪ್ರಕರಣದ ಪೊಲೀಸ್​ ತನಿಖೆ ವೇಳೆ ಭಯೋತ್ಪಾದಕರ ಲಿಂಕ್​ ಕೂಡ ಇರುವುದು ಬಯಲಾಗಿತ್ತು. ಈ ಪ್ರಕರಣ ಸಂಬಂಧ ನಾಗ್ಪುರ ಪೊಲೀಸರು ಕೈದಿ ಜಯೇಶ್​ ಪೂಜಾರಿಯನ್ನು ಬಂಧಿಸಿದ್ದಾರೆ. ನಂತರ ಬೆಳಗಾವಿ ಜೈಲಿನಿಂದ ಭಯೋತ್ಪಾದಕ ಅಫ್ಸರ್​ ಪಾಷಾನ್ನು ಕೂಡ ಬಂಧಿಸಿದ್ದಾರೆ. ಜಯೇಶ್​ ಪೂಜಾರಿ ಬೆಳಗಾವಿ ಜೈಲಿನಿಂದ ಜನವರಿ 14 ಹಾಗೂ ಮಾರ್ಚ್​ 21 ರಂದು ಖಮ್ಲಾದಲ್ಲಿದ್ದ ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಕರೆ ಮಾಡಿ, ಜೀವಬೆದರಿಕೆ ಹಾಕುವುದರ ಜೊತೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದನು. 2016ರಲ್ಲಿ ಮಾಡಿದ ಕೊಲೆ ಪ್ರಕರಣದಲ್ಲಿ ಜಯೇಶ್​ ಪೂಜಾರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು.

ಕೇಂದ್ರ ಸಚಿವ ನಿತಿನ್​ ಗಡ್ಕರಿ ಪ್ರಕರಣದ ತನಿಖೆ ನಡೆಸಿದ್ದ ನಾಗ್ಪುರ ಪೊಲೀಸರು ಬೆಳಗಾವಿ ಜೈಲಿನಿಂದ ಜಯೇಶ್​ ಪೂಜಾರಿಯನ್ನು ಬಂಧಿಸಿದ್ದರು. ಆರೋಪಿಯ ವಿಚಾರಣೆಯ ವೇಳೆ ಈ ಪ್ರಕರಣದಲ್ಲಿ ಭಯೋತ್ಪಾದಕ ಅಫ್ಸರ್​ ಪಾಷಾ ಭಾಗಿಯಾಗಿರುವ ಬಗ್ಗೆ ಆಘಾತಕಾರಿ ಮಾಹಿತಿಯನ್ನು ನೀಡಿದ್ದನು. ಜಯೇಶ್​ ಪೂಜಾರಿ ನೀಡಿದ ಮಾಹಿತಿಯನ್ನು ಆಧರಿಸಿ ನಾಗ್ಪುರ ಪೊಲೀಸರು ಬೆಳಗಾವಿ ಜೈಲಿನಲ್ಲಿದ್ದ ಅಫ್ಸರ್​ ಪಾಷಾನನ್ನು ಬಂಧಿಸಿ ನಾಗ್ಪುರಕ್ಕೆ ಕರೆತಂದಿದ್ದರು. ನಾಗ್ಪುರದಲ್ಲಿ ಜಯೇಶ್​ ಪೂಜುಆರಿ ಹಾಗೂ ಅಫ್ಸರ್​ ಪಾಷಾ ಅವರನ್ನು ಮುಖಾಮುಖಿ ವಿಚಾರಣೆ ನಡೆಸಲಾಯಿತು. ನಾಗ್ಪುರ ಜೊತೆಗೆ ಆರೋಪಿಗಳಿಗಿರುವ ಸಂಬಂಧ ಈ ವೇಳೆ ಬಯಲಾಗಿತ್ತು. ಸದ್ಯ ಇಬ್ಬರೂ ಆರೋಪಿಗಳು ನಾಗ್ಪುರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

 


Spread the love

About Laxminews 24x7

Check Also

Bigg Boss ಸೀಸನ್​-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು

Spread the love ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss)​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ