Breaking News

ಬ್ಯಾಟ್ಸ್​ಮನ್ ಆಗಿ ಗೆದ್ದರೂ ನಾಯಕನಾಗಿ ಸೋತ ರಾಹುಲ್,ಹೊರಕ್ಕೆ ಬಿದ್ದ ಪಂಜಾಬ್, ಚೆನ್ನೈ

Spread the love

ಅಬುಧಾಬಿ: ಇಂದು ನಡೆದ ಬೊಂಬಾಟ್ ಭಾನುವಾರದ ಮೊದಲನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 9 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತನ್ನ ಜೊತೆ ಪಂಜಾಬ್ ತಂಡವನ್ನು ಕೂಡ ಐಪಿಎಲ್-2020ಯಿಂದ ಹೊರಕ್ಕೆ ಕರೆದುಕೊಂಡು ಹೊರಟಿದೆ.

ಇಂದು ಅಬುಧಾಬಿ ಮೈದಾನದಲ್ಲಿ ನಡೆದ 53ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ ಉತ್ತಮ ಆರಂಭ ಪಡೆದು ಮಧ್ಯಮ ಕ್ರಮಾಂಕದಲ್ಲಿ ಕುಸಿದಿತು. ಆದರೆ ಕೊನೆಯಲ್ಲಿ ದೀಪಕ್ ಹೂಡಾ ಸ್ಫೋಟಕ ಬ್ಯಾಟಿಂಗ್‍ನಿಂದ ನಿಗದಿತ 20 ಓವರಿನಲ್ಲಿ 154 ರನ್ ಪೇರಿಸಿತು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಚೆನ್ನೈ ತಂಡ ಫಫ್ ಡು ಪ್ಲೆಸಿಸ್, ರುತುರಾಜ್ ಗಾಯಕ್ವಡ್ ಅದ್ಭುತ ಜೊತೆಯಾಟದಿಂದ ಇನ್ನೂ 7 ಬಾಲು ಉಳಿದಂತೆ ಗೆದ್ದು ಬೀಗಿತು.

ಹೊರಕ್ಕೆ ಬಿದ್ದ ಪಂಜಾಬ್, ಚೆನ್ನೈ
53 ಪಂದ್ಯಗಳು ಕಳೆದರು ಈ ಬಾರಿಯ ಐಪಿಎಲ್‍ನಲ್ಲಿ ಪ್ಲೇ ಆಫ್ ತಲುಪುವ ನಾಲ್ಕು ತಂಡಗಳು ಅಂತಿಮವಾಗಿಲ್ಲ. ಆದರೆ ಇಂದಿನ ಪಂದ್ಯದಲ್ಲಿ ಗೆದ್ದ ಚೆನ್ನೈ ಮತ್ತು ಸೋತ ಪಂಜಾಬ್ ತಂಡಗಳೆರಡು ಟೂರ್ನಿಯಿಂದ ಹೊರಬಿದ್ದಿವೆ. ಮುಂಬೈ ಇಂಡಿಯನ್ಸ್ ಏಕೈಕ ತಂಡ ಪ್ಲೇ ಆಫ್‍ಗೆ ಆಯ್ಕೆಯಾಗಿದೆ. ಒಂದು ವೇಳೆ ಈ ಪಂದ್ಯದಲ್ಲಿ ಪಂಜಾಬ್ ತಂಡ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರೆ ರನ್‍ರೇಟ್ ಆಧಾರದ ಮೇಲೆ ಪ್ಲೇ ಆಫ್ ತಲುಪುವ ಅವಕಾಶವಿತ್ತು.


Spread the love

About Laxminews 24x7

Check Also

ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

Spread the loveವಾಷಿಂಗ್ಟನ್: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ