Breaking News

ಆನೆಗಳು ಬಲಿಷ್ಠ ವನ್ಯಜೀವಿಗಳಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ : ಈಶ್ವರಖಂಡ್ರೆ

Spread the love

ಬೆಂಗಳೂರು : ರಾಜ್ಯದ ಆನೆಗಳ ಸಂಖ್ಯೆಯಲ್ಲಿ 350ರಷ್ಟು ಹೆಚ್ಚಳವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು. ಈ ಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂದು ಅಂದಾಜು ಮಾಡಲಾಗಿದ್ದು, ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು.

ಅವಸಾನದ ಅಂಚಿನಲ್ಲಿರುವ ಆನೆಗಳನ್ನು ಸಂರಕ್ಷಿಸುವ ಸಲುವಾಗಿ, ಆನೆಗಳಿಗೂ ನೆಮ್ಮದಿಯಿಂದ ಬದುಕಲು ಅವುಗಳ ಆವಾಸಸ್ಥಾನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು 2012 ಆಗಸ್ಟ್ 12ರಿಂದ ‘ವಿಶ್ವ ಆನೆ ದಿನ’ ಆಚರಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಆನೆಗಳ ದಿನದಂದು ದೇಶದಲ್ಲಿ ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ ಅಥವಾ ಇಳಿಮುಖವಾಗಿದೆಯೇ ಎಂದು ತಿಳಿಯಲು ಆನೆಗಳ ಗಣತಿಯನ್ನು ಪ್ರತಿ 5 ವರ್ಷಗಳಿಗೊಮ್ಮೆ ಮಾಡಲಾಗುತ್ತದೆ. ಈ ಹಿಂದೆ ಆನೆ ಗಣತಿ 2017ರಲ್ಲಿ ನಡೆದಿತ್ತು. 2022ರಲ್ಲಿ ಆನೆ ಗಣತಿಯನ್ನು ಅಖಿಲ ಭಾರತ ಹುಲಿ ಗಣತಿಯ ಭಾಗವಾಗಿ ಮಾಡಲು ಪ್ರಯತ್ನಿಸಲಾಯಿತು. ಆದರೆ, ಈ ಸಮೀಕ್ಷೆಯು ಮಾದರಿ ಬ್ಲಾಕ್‌ ಎಣಿಕೆ (Sample Block Count) ಮತ್ತು ಆನೆಗಳ ಸಂಖ್ಯೆ ಸ್ವರೂಪದ (Population Structure) ಮೌಲ್ಯ ಮಾಪನವನ್ನು ಒಳಗೊಂಡಿರಲಿಲ್ಲ. ಈ ವಿಧಾನ ಆನೆಗಳ ಗಣತಿ ಮತ್ತು ಸಂಖ್ಯಾ ಸ್ವರೂಪ ಅಂದರೆ, ಲಿಂಗ ಮತ್ತು ವಯಸ್ಸಿನ ವರ್ಗೀಕರಣಕ್ಕೆ ಬಹಳ ಮುಖ್ಯವಾಗಿದೆ ಎಂದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ