Breaking News

ಚುನಾವಣೆ ಗೆಲ್ಲಲು ಕೈ ಮಹಾಪ್ಲಾನ್​.. ವಿದ್ಯಾರ್ಥಿನಿಗೆ ಸ್ಮಾರ್ಟ್​​​ ಫೋನ್​ ವಿತರಿಸಿದ ರಾಹುಲ್

Spread the love

ಜೈಪುರ(ರಾಜಸ್ಥಾನ): ಮತ್ತೆ ಅಧಿಕಾರಕ್ಕೆ ಮರಳಲು ಪ್ಲಾನ್​ ಹಾಕಿರುವ ಸಿಎಂ ಅಶೋಕ್​ ಗೆಹ್ಲೋಟ್​ ಅದಕ್ಕಾಗಿ ಭರ್ಜರಿ ಕಾರ್ಯತಂತ್ರವನ್ನು ರೂಪಿಸುತ್ತಿದ್ದಾರೆ. ಇದಕ್ಕಾಗಿ ಅವರು ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಜೈಪುರದ ಬಿರ್ಲಾ ಆಡಿಟೋರಿಯಂನಲ್ಲಿ ಇಂದು ಸ್ಮಾರ್ಟ್​ಫೋನ್​ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಯೋಜನೆಗೆ ಚಾಲನೆ ಸಿಗುವ ಮುನ್ನವೇ ಕಾಂಗ್ರೆಸ್​ ನೇತಾರ, ರಾಹುಲ್​ ಗಾಂಧಿ ನಿನ್ನೆ ಮಂಗರ್‌ನಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಸ್ಮಾರ್ಟ್‌ಫೋನ್ ಹಸ್ತಾಂತರಿಸುವ ಮೂಲಕ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ಮೊದಲ ಸುತ್ತಿನಲ್ಲಿ ಚಿರಂಜೀವಿ ಕುಟುಂಬದ ಮಹಿಳಾ ಮುಖ್ಯಸ್ಥರು ಸ್ಮಾರ್ಟ್‌ಫೋನ್‌ಗಳನ್ನು ಪಡೆಯಲಿದ್ದಾರೆ. ಸ್ಮಾರ್ಟ್​ ಫೋನ್​ ಯೋಜನೆ ಅಡಿ ರಾಜ್ಯದ 40 ಲಕ್ಷ ಮಹಿಳೆಯರು ಮತ್ತು ವಿದ್ಯಾರ್ಥಿಗಳು ಸ್ಮಾರ್ಟ್ ಫೋನ್ ಪಡೆಯಲಿದ್ದಾರೆ. ಅಷ್ಟೇ ಅಲ್ಲ ಇವತ್ತೇ ‘ಡಿಜಿಟಲ್ ಸಖಿ ಪುಸ್ತಕ’ವನ್ನ ಬಿಡುಗಡೆ ಆಗಲಿದೆ.

ಈ ಯೋಜನೆಯ ಮಾನದಂಡಗಳೇನು?: ಸ್ಮಾರ್ಟ್‌ಫೋನ್ ಮತ್ತು ಸಿಮ್‌ಗಾಗಿ 6,800 ರೂಗಳನ್ನು ನೇರ ಹಣ ವರ್ಗಾವಣೆ ಡಿಬಿಟಿ ಮೂಲಕ ಇ-ವ್ಯಾಲೆಟ್‌ನಲ್ಲಿ ಠೇವಣಿ ಇಡಲಾಗುತ್ತದೆ. ಇದಲ್ಲದೇ ಸರ್ಕಾರಿ ಶಾಲೆಗಳಲ್ಲಿ 9 ರಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯರಿಗೂ ಸ್ಮಾರ್ಟ್‌ಫೋನ್ ಸಿಗಲಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು, ವಿಧವೆ -ಒಂಟಿ ಮಹಿಳಾ ಪಿಂಚಣಿ ಪಡೆಯುವ ವನಿತೆಯರು ಹಾಗೂ 2022-23ರಲ್ಲಿ MNREGA ಯೋಜನೆಯಲ್ಲಿ 100 ಕೆಲಸದ ದಿನಗಳನ್ನು ಪೂರೈಸಿದ ಮಹಿಳಾ ಮುಖ್ಯಸ್ಥರು, 2022-23 ರಲ್ಲಿ ಇಂದಿರಾಗಾಂಧಿ ನಗರ ಉದ್ಯೋಗ ಖಾತ್ರಿ ಯೋಜನೆಯಲ್ಲಿ 50 ಕೆಲಸದ ದಿನಗಳನ್ನು ಪೂರ್ಣಗೊಳಿಸಿದ ಮಹಿಳೆಯರ ಕುಟುಂಬದ ಮಹಿಳಾ ಮುಖ್ಯಸ್ಥರು ಈ ಸ್ಮಾರ್ಟ್​ ಫೋನ್​ಗಳನ್ನು ಪಡೆಯಲು ಅರ್ಹರಾಗಿದ್ದಾರೆ.

 


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ