Breaking News

ರೈಲು ಟಿಕೆಟನ್ನು ಆನ್‌ಲೈನ್‌ನಲ್ಲಿ ರದ್ದು ಮಾಡಲು ಪ್ರಯತ್ನಿಸುವಾಗ 3.5 ಲಕ್ಷ ರೂಪಾಯಿ ಕಳೆದುಕೊಂಡ

Spread the love

ಸೈಬರ್ ಕಳ್ಳರು ಜನರ ಖಾತೆಗಳಿಂದ ಹಣ ದೋಚುವ ಪ್ರಕರಣಗಳು ಮುಂದುವರೆದಿವೆ.

ಈ ಕುರಿತು ಮತ್ತೊಂದು ಘಟನೆ ವರದಿಯಾಗಿದ್ದು, ಕೋಝಿಕ್ಕೋಡ್ ಮೂಲದ ವ್ಯಕ್ತಿ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ.

ಕೋಝಿಕ್ಕೋಡ್‌ನ ವ್ಯಕ್ತಿ ತನ್ನ ರೈಲು ಟಿಕೆಟನ್ನು ಆನ್‌ಲೈನ್‌ನಲ್ಲಿ ರದ್ದು ಮಾಡಲು ಪ್ರಯತ್ನಿಸುವಾಗ 3.5 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಅವರ ಎಸ್​ಬಿ ಮತ್ತು ಎಫ್​ಡಿ ಖಾತೆಗಳಿಂದ ಹಣ ದೋಚಲಾಗಿದೆ. 3 ಸೀಕ್ರೆಟ್ ಕೋಡ್ ವೆರಿಫಿಕೇಶನ್ ಮತ್ತು 2 ಒಟಿಪಿ ವೆರಿಫಿಕೇಶನ್​ಗಳ ನಂತರ ಖಾತೆಯಿಂದ ಹಣ ಕಳ್ಳತನ ಮಾಡಲಾಗಿದೆ. ಈ ಪ್ರಕರಣ ಪೊಲೀಸ್ ತನಿಖಾಧಿಕಾರಿಗಳ ಅಚ್ಚರಿಗೂ ಕಾರಣವಾಗಿದೆ. ಪೊಲೀಸರ ಪ್ರಕಾರ, ಇಂಥ ವಂಚನೆ ನಡೆದಿರುವುದು ಇದೇ ಮೊದಲು.

ಕೋಝಿಕ್ಕೋಡ್ ಸ್ಥಳೀಯರೊಬ್ಬರು ಭಾರತೀಯ ರೈಲ್ವೆಯ ಅಧಿಕೃತ ವೆಬ್​ಸೈಟ್ IRCTC ಮೂಲಕ ಟಿಕೆಟ್​ ರದ್ದತಿ ಪ್ರಕ್ರಿಯೆ ಪ್ರಾರಂಭಿಸಿದ್ದರು. ಮೊಬೈಲ್‌ನಲ್ಲಿ ಸೈಟ್ ತೆರೆದಾಗ, ಅದೇ ವೆಬ್‌ಸೈಟ್ ಕಾಣಿಸಿದೆ. ಕೇಳಿದ ಒಟಿಪಿ ಸಂಖ್ಯೆ ನೀಡಿದ ನಂತರ, ಟಿಕೆಟ್ ಕೂಡಾ ಕ್ಯಾನ್ಸಲ್​ ಆಗಿದೆ. ಮರುಪಾವತಿ ಮೊತ್ತವನ್ನು ಖಾತೆಗೆ ಹಿಂತಿರುಗಿಸಲಾಗಿದೆ ಎಂಬ ಸಂದೇಶವೂ ಬಂದಿದೆ.

ಈ ವೇಳೆ ಖಾತೆಯನ್ನು ಪರಿಶೀಲಿಸಿದಾಗ 50 ಸಾವಿರ ರೂಪಾಯಿ ಡ್ರಾ ಆಗಿದೆ ಎಂದು ಸಂದೇಶ ಬಂದಿತ್ತು. ಕೆಲವೇ ಸೆಕೆಂಡ್‌ಗಳಲ್ಲಿ ಮತ್ತೆ 50,000 ರೂ. ಹಣ ಎಗರಿಸಲಾಗಿದೆ. ತಕ್ಷಣವೇ ಬ್ಯಾಂಕ್​ಗೆ ತೆರಳಿ ಖಾತೆ ಪರಿಶೀಲಿಸಿದಾಗ, ಮೂರೂವರೆ ಲಕ್ಷ ಹಣ ಕಳೆದುಕೊಂಡಿರುವುದು ಗೊತ್ತಾಗಿದೆ. ಅವರು ಕೂಡಲೇ ಮ್ಯಾನೇಜರ್​ಗೆ ದೂರು ನೀಡಿದ್ದಾರೆ. ಹಣ ಕಳೆದುಕೊಂಡ ವ್ಯಕ್ತಿ ನಿವೃತ್ತ ಸರ್ಕಾರಿ ನೌಕರ. ವಿದೇಶದಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ರಜೆಯಲ್ಲಿದ್ದಾರೆ. ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ