Breaking News

ಕರ್ನಾಟಕ ಗೆಲುವಿನ ಹುಮ್ಮಸ್ಸು, ತೆಲಂಗಾಣದಲ್ಲೂ ಪಕ್ಷವನ್ನು ಗೆಲ್ಲಿಸುವ ಗಟ್ಟಿ ವಿಶ್ವಾಸ: ಡಿಕೆಶಿ- ಪ್ರಿಯಾಂಕಾಗೆ ಹೆಚ್ಚಿನ ಹೊಣೆ!?

Spread the love

ಹೈದರಾಬಾದ್: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಅಭೂತಪೂರ್ವ ಗೆಲುವು, ಕೈ ಹಕಮಾಂಡ್​​​ಗೆ ಭರ್ಜರಿ ಬೂಸ್ಟ್ ನೀಡಿದೆ. ಹೀಗಾಗಿ ಮುಂಬರುವ ಚುನಾವಣೆಗಳನ್ನು ಎದುರಿಸಲು ಕಾಂಗ್ರೆಸ್​​​ ರಣೋತ್ಸಾಹದಿಂದ ಮುನ್ನುಗ್ಗುತ್ತಿದೆ. ಯಾವುದೇ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿ ಮುನ್ನಡೆಯುವ ಛಾತಿಯಲ್ಲಿದೆ.

ಕರ್ನಾಟಕ ಗೆಲುವಿನ ಹುಮ್ಮಸ್ಸು, ತೆಲಂಗಾಣದಲ್ಲೂ ಪಕ್ಷವನ್ನು ಗೆಲ್ಲಿಸುವ ಗಟ್ಟಿ ವಿಶ್ವಾಸವನ್ನು ಪಕ್ಷದ ನಾಯಕರಲ್ಲಿ ಬಲಗೊಳಿಸಿದೆ. ಹೀಗಾಗಿ ಕಾಂಗ್ರೆಸ್ ಮತ್ತಷ್ಟು ಸಮರ್ಥವಾಗಿ ಮುನ್ನಡೆಯಲು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಚಾರ ಹಾಗೂ ಅನುಸರಿಸಬೇಕಾದ ಕಾರ್ಯತಂತ್ರಗಳ ಜವಾಬ್ದಾರಿಯನ್ನು ನೀಡಲು ಹೈಕಮಾಂಡ್ ನಿರ್ಧರಿಸಿದೆ ಎಂದು ಕಾಂಗ್ರೆಸ್​ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಈಗಾಗಲೇ ಕರ್ನಾಟಕದ ಉಪ ಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಅವರಿಗೆ ತೆಲಂಗಾಣ ಚುನಾವಣಾ ಉಸ್ತುವಾರಿಯನ್ನು ವಹಿಸಲಾಗಿದೆ. ಇದರ ಜೊತೆಗೆ ತೆಲಂಗಾಣದಲ್ಲಿ ಪಕ್ಷದದ ಬಲವರ್ದನೆಗೆ ಎಐಸಿಸಿ ಕಾರ್ಯದರ್ಶಿಗಳು ತಮ್ಮ ಕಸರತ್ತನ್ನು ಮುಂದುವರೆಸಿದ್ದಾರೆ. ಇನ್ನು ಕಾಂಗ್ರೆಸ್​ ನಾಯಕತ್ವದ ಪರವಾಗಿ ಪ್ರಿಯಾಂಕಾ ಗಾಂಧಿ ಮತ್ತು ಡಿ ಕೆ ಶಿವಕುಮಾರ್, ತೆಲಂಗಾಣದಲ್ಲಿ ಪಕ್ಷದ ಗೆಲುವಿಗೆ ಬೇಕಾದ ಎಲ್ಲ ಕಾರ್ಯತಂತ್ರ, ರಣತಂತ್ರ ಹಾಗೂ ಪಕ್ಷದ ಬಲವರ್ದನೆಗೆ ಸಂಬಂಧಿಸಿದಂತೆ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.

ಅದರಲ್ಲೂ ಪಕ್ಷದ ನಾಯಕರಲ್ಲಿ ಒಗ್ಗಟ್ಟು ಕಾಪಾಡುವುದು, ಎಲ್ಲರೂ ಒಗ್ಗೂಡಿ ಸೌಹಾರ್ದತೆಯಿಂದ ಕೆಲಸ ಮಾಡುವಂತೆ ನೋಡಿಕೊಳ್ಳುವುದು, ಕಾಲಕಾಲಕ್ಕೆ ತಂತ್ರಗಳಲ್ಲಿ ಬದಲಾವಣೆ ಮಾಡುವುದು ಹೀಗೆ ಗೆಲುವಿಗೆ ಏನೆಲ್ಲ ಮಾಡಬೇಕೋ ಅದನ್ನು ಯಶಸ್ವಿಯಾಗಿ ಮಾಡಲು ಈ ಇಬ್ಬರು ನಾಯಕರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಕಾಂಗ್ರೆಸ್​ನ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ