Breaking News

ಬೆಳ್ಳಂ ಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ಮೂವರು ಸಾವ

Spread the love

ಬೆಳಗಾವಿ: ಬೆಳ್ಳಂ ಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಹೃದಯವಿದ್ರಾವಕ ನಗರದಲ್ಲಿ ಸಂಭವಿಸಿದೆ.

ಇಲ್ಲಿನ ಶಾಹುನಗರದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸದಸ್ಯರು ದುರ್ಮರಣ ಹಿನ್ನೆಲೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟದೆ. ಸ್ಥಳಕ್ಕೆ ಕಟ್ಟಡದ ಮಾಲೀಕ ಮತ್ತು ಇಂಜಿನಿಯರ್ ಬಂದ ಬಳಿಕ ಮೃತದೇಹಗಳನ್ನು ತೆರವು ಮಾಡುತ್ತೇವೆ ಎಂದು ಸಂಬಂಧಿಕರು ಪಟ್ಟು ಹಿಡಿದಿದ್ದಾರೆ.

ಬೋರವೆಲ್ ಸ್ವಿಚ್ ಆನ್​ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ಈ ಅವಘಡ ಸಂಭವಿಸಿರುವುದಾಗಿ ಪ್ರಾಥಮಿಕ‌ ಮಾಹಿತಿ ಲಭ್ಯವಾಗಿದೆ. ಮೃತರು ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದ ನಿವಾಸಿ ಈರಪ್ಪ ಗಂಗಪ್ಪ ರಾಥೋಡ (55), ಶಾಂತವ್ವ ಈರಪ್ಪ ರಾಥೋಡ (50) ಮತ್ತು ಅನ್ನಪೂರ್ಣ ಹೊನ್ನಪ್ಪ ರಾಥೋಡ (8) ಎಂದು ಗುರುತಿಸಲಾಗಿದೆ.

 ಮೃತ ಈರಪ್ಪ ಹಾಗೂ ಶಾಂತವ್ವನಿರ್ಮಾಣ ಹಂತದ ಮನೆಗೆ ವಾಚ್‌ಮನ್ ಆಗಿ ರಾಥೋಡ್ ದಂಪತಿ ಕೆಲಸ ಮಾಡುತ್ತಿದ್ದರು. ಮೊಮ್ಮಗಳಾದ ಅನ್ನಪೂರ್ಣಳನ್ನು ಶಿಕ್ಷಣಕ್ಕಾಗಿ ತಮ್ಮ ಬಳಿ ಈ ದಂಪತಿ ಇಟ್ಟುಕೊಂಡಿದ್ದರು. ಬೆಳಿಗ್ಗೆ ಎಂದಿನಂತೆ ಕಟ್ಟಡಕ್ಕೆ ನೀರು ಹೊಡೆಯಲು ಅಜ್ಜ ಈರಪ್ಪ ಮೊಮ್ಮಗಳು ಅನ್ನಪೂರ್ಣಾಗೆ ಮೋಟರ್ ಆನ್​ ಮಾಡಲು ಹೇಳಿದ್ದಾರೆ. ಆಗ ಅನ್ನಪೂರ್ಣ ಮೋಟರ್ ಆನ್​ ಮಾಡಲು ಹೋದಾಗ ಟೆಕ್ನಿಕಲ್​ ಸಮಸ್ಯೆ ಎದುರಾಗಿದೆ. ಬಳಿಕ ಹೊರಗೆ ಬಂದ ಬಾಲಕಿ ಮೋಟರ್ ವಾಯರ್ ಹಿಡಿದುಕೊಂಡು ತೆರಳಿದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ. ಮೊಮ್ಮಗಳ ಸ್ಥಿತಿ ಅರಿತ ಅಜ್ಜಿ ಶಾಂತವ್ವ ಹೊರಗೆ ಓಡಿ ಬಂದು ಬಾಲಕಿಯನ್ನು ಹಿಡಿದಿದ್ದಾರೆ. ಆಗ ಅಜ್ಜಿಗೂ ವಿದ್ಯುತ್ ತಾಗಿದೆ, ಇಬ್ಬರು ಒದ್ದಾಡುತ್ತಿರುವುದು ಕಂಡು ಧಾವಿಸಿದ ಅಜ್ಜ ಈರಪ್ಪಗೂ ವಿದ್ಯುತ್ ತಾಗಿದೆ. ಕರೆಂಟ್​ ಶಾಕ್​​ನಿಂದಾಗಿ ಸ್ಥಳದಲ್ಲೇ ಮೂವರು ಕೊನೆಯುಸಿರೆಳೆದ್ದಾರೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ