Breaking News

ಕುಮಾರಸ್ವಾಮಿ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ,: ಸಿದ್ದರಾಮಯ್ಯ

Spread the love

ಬೆಂಗಳೂರು: ಕುಮಾರಸ್ವಾಮಿ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ. ಪೆನ್​ಡ್ರೈವ್ ಇಟ್ಟುಕೊಂಡಿದ್ದೇನೆ ಅನ್ನೋದು‌ ಸುಮ್ಮನೆ ಜೋಬಲ್ಲಿ ಇಟ್ಕೊಳ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಭಾರತ್ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಸರ್ವ ಸದಸ್ಯರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಬರೀ ಸುಳ್ಳು ಆರೋಪ ಮಾಡ್ತಾರೆ ಎಂದಿದ್ದಾರೆ.

ಇವರ ಕಾಲದಲ್ಲಿ ವರ್ಗಾವಣೆ ಆಗಿಲ್ಲವಾ?. ಹೊಸ ಸರ್ಕಾರ ಬಂದಾಗ ಸಹಜವಾಗಿನೇ ದೊಡ್ಡ ಪ್ರಮಾಣದಲ್ಲಿ ವರ್ಗಾವಣೆ ಆಗುತ್ತದೆ. ಪೆನ್​ಡ್ರೈವ್ ಇಟ್ಟುಕೊಂಡಿದ್ದೇನೆ ಅನ್ನೋದು, ಅದನ್ನು ಕಿಸೆಯಿಂದ ತೆಗೆದು ತೋರಿಸುವುದು ಬೇರೆ. ಬರೀ ಸುಳ್ಳು ಆರೋಪ ಮಾಡುವುದು. ತನಿಖೆ ಶುರುವಾಗುತ್ತಿದ್ದಂತೆ ಬಿಜೆಪಿಯವರಿಗೆ ನಡುಕ ಶುರುವಾಗಿದೆ. ವರದಿ ಬರಲಿ, ಎಲ್ಲವೂ ಗೊತ್ತಾಗಲಿದೆ. ತನಿಖಾ ವರದಿ ಬರಲಿ, ಅವರ ಬಂಡವಾಳ ಎಲ್ಲ ಬಯಲಾಗುತ್ತದೆ ಎಂದು ಸಿಎಂ ವಾಗ್ದಾಳಿ ನಡೆಸಿದರು.

34 ವರ್ಷಗಳ ಬಳಿಕ‌ ದೊಡ್ಡ ಮಟ್ಟದಲ್ಲಿ ನಮಗೆ ಜನ ಆಶೀರ್ವಾದ ಮಾಡಿದ್ದಾರೆ. ಇತಿಹಾಸ ನೋಡಿದರೆ ಬಿಜೆಪಿ 35-36%ಗಿಂತ ಹೆಚ್ಚು ಮತಪಾಲು ಗಳಿಸೇ ಇಲ್ಲ.‌ ಜೆಡಿಎಸ್​ನವರು ಪಂಚ ರತ್ನ ಹೇಳಿ ಇಡೀ ರಾಜ್ಯದಲ್ಲಿ ಓಡಾಡಿ ಭ್ರಮೆ ಹುಟ್ಟಿಸುವ ಕೆಲಸ ಮಾಡಿದ್ದರು. ಅವರನ್ನು ರಾಜ್ಯದ ಜನ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಮೋದಿ ಬಂದರೆ ಗೆಲ್ಲುತ್ತೇವೆ ಎಂಬುದು ಬಿಜೆಪಿಯವರ ಆಶಾಭಾವನೆ ಆಗಿತ್ತು. ಆದರೆ ರಾಜ್ಯದ ಜನರು ಬುದ್ಧಿವಂತರು. ಅವರ ಎಲ್ಲಾ ಲೆಕ್ಕಾಚಾರವನ್ನು ತಲೆ ಕೆಳಗೆ ಮಾಡಿದ್ದಾರೆ.


Spread the love

About Laxminews 24x7

Check Also

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್…

Spread the love ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ