Breaking News

ಆಕ್ಷೇಪಾರ್ಹ ಪದ ಬಳಕೆ ಆರೋಪ; ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್ ವಿರುದ್ಧ ದೂರು

Spread the love

ಬೆಂಗಳೂರು : ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ರಾಜ್ಯ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ವಿರುದ್ಧ ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

 

ದಿವಾಕರ್ ಎಂಬವರು ನೀಡಿದ ದೂರಿನ ಮೇರೆಗೆ ಸಚಿವರ ವಿರುದ್ಧ ಗಂಭೀರವಲ್ಲದ ಅಪರಾಧ ಪ್ರಕರಣ (ಎನ್‌ಸಿಆರ್) ದಾಖಲಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡುವಾಗ ಸಚಿವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೊಲೀಸರಿಗೆ ನೀಡಲಾಗಿದೆ.

ಸಚಿವರು ಮಾತನಾಡಿರುವ ಸ್ಥಳ ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಾಗಿದ್ದು, ಪ್ರಕರಣವನ್ನು ರಾಜಾಜಿನಗರ ಪೊಲೀಸರು ‌ವಿಧಾನಸೌಧ ಠಾಣೆಗೆ ವರ್ಗಾಯಿಸಲು ಸಿದ್ಧತೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ

Spread the love ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ