ಉಡುಪಿ: ಗದ್ದೆಯಲ್ಲಿ ಬೇಸಾಯ ಕೆಲಸ ಮಾಡುತ್ತಿದ್ದ ರೈತ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ರೈತ ಸಾಧು (70) ಬೇಸಾಯ ಚಟುವಟಿಕೆ ಮಾಡುತ್ತಿದ್ದಾಗ ಮೃತಪಟ್ಟಿದ್ದಾರೆ.
ಚೇರ್ಕಾಡಿ ಗ್ರಾಮದ ಜಾರ್ ಜೆಡ್ಡು ಎಂಬಲ್ಲಿ ಈ ಘಟನೆ ನಡೆದಿದ್ದು, ಸಾಧು ಅವರು ಗದ್ದೆಯ ಬದು ಕಟ್ಟುತ್ತಿದ್ದರು. ನಾಳೆ ಬಿತ್ತನೆ ಮತ್ತು ನಾಟಿ ಕೆಲಸ ಮಾಡಬೇಕಿತ್ತು. ಹೀಗಾಗಿ ಇಂದು ದಿನ ಪೂರ್ತಿ ಬೇಸಾಯದ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ವಿದ್ಯುತ್ ತಂತಿ ಸಾಧು ಅವರ ಮೇಲೆ ಬಿದ್ದಿದೆ. ಪರಿಣಾಮ ಅವರು ಹೊಲದಲ್ಲೇ ಮೃತಪಟ್ಟಿದ್ದಾರೆ.

ಬ್ರಹ್ಮಾವರ ತಾಲೂಕು ಅಧಿಕಾರಿಗಳು ಭೇಟಿಕೊಟ್ಟು ಪರಿಶೀಲನೆ ಮಾಡಿದ್ದಾರೆ. ಬ್ರಹ್ಮಾವರ ಠಾಣಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಸರ್ಕಾರಕ್ಕೆ ವರದಿಯನ್ನು ತಕ್ಷಣ ರವಾನೆ ಮಾಡುತ್ತಿದ್ದು, ತಾಂತ್ರಿಕ ಸಮಸ್ಯೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಹಶೀಲ್ದಾರರು ಭರವಸೆ ಕೊಟ್ಟಿದ್ದಾರೆ. ಸೂಕ್ತ ಪರಿಹಾರ ಒದಗಿಸುವುದಾಗಿ ಹೇಳಿದ್ದಾರೆ.
Laxmi News 24×7