Breaking News

ಗದ್ದೆ ಹದ ಮಾಡುತ್ತಿದ್ದ ರೈತನ ಮೇಲೆ ಬಿದ್ದ ವಿದ್ಯುತ್ ತಂತಿ………..

Spread the love

ಉಡುಪಿ: ಗದ್ದೆಯಲ್ಲಿ ಬೇಸಾಯ ಕೆಲಸ ಮಾಡುತ್ತಿದ್ದ ರೈತ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ರೈತ ಸಾಧು (70) ಬೇಸಾಯ ಚಟುವಟಿಕೆ ಮಾಡುತ್ತಿದ್ದಾಗ ಮೃತಪಟ್ಟಿದ್ದಾರೆ.

ಚೇರ್ಕಾಡಿ ಗ್ರಾಮದ ಜಾರ್ ಜೆಡ್ಡು ಎಂಬಲ್ಲಿ ಈ ಘಟನೆ ನಡೆದಿದ್ದು, ಸಾಧು ಅವರು ಗದ್ದೆಯ ಬದು ಕಟ್ಟುತ್ತಿದ್ದರು. ನಾಳೆ ಬಿತ್ತನೆ ಮತ್ತು ನಾಟಿ ಕೆಲಸ ಮಾಡಬೇಕಿತ್ತು. ಹೀಗಾಗಿ ಇಂದು ದಿನ ಪೂರ್ತಿ ಬೇಸಾಯದ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ವಿದ್ಯುತ್ ತಂತಿ ಸಾಧು ಅವರ ಮೇಲೆ ಬಿದ್ದಿದೆ. ಪರಿಣಾಮ ಅವರು ಹೊಲದಲ್ಲೇ ಮೃತಪಟ್ಟಿದ್ದಾರೆ.

ಬ್ರಹ್ಮಾವರ ತಾಲೂಕು ಅಧಿಕಾರಿಗಳು ಭೇಟಿಕೊಟ್ಟು ಪರಿಶೀಲನೆ ಮಾಡಿದ್ದಾರೆ. ಬ್ರಹ್ಮಾವರ ಠಾಣಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಸರ್ಕಾರಕ್ಕೆ ವರದಿಯನ್ನು ತಕ್ಷಣ ರವಾನೆ ಮಾಡುತ್ತಿದ್ದು, ತಾಂತ್ರಿಕ ಸಮಸ್ಯೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಹಶೀಲ್ದಾರರು ಭರವಸೆ ಕೊಟ್ಟಿದ್ದಾರೆ. ಸೂಕ್ತ ಪರಿಹಾರ ಒದಗಿಸುವುದಾಗಿ ಹೇಳಿದ್ದಾರೆ.


Spread the love

About Laxminews 24x7

Check Also

ಜಿಬಿಎ 5 ನಗರ ಪಾಲಿಕೆಯ ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

Spread the loveಬೆಂಗಳೂರು: ಜಿಬಿಎ  ವ್ಯಾಪ್ತಿಯ 5 ನಗರ ಪಾಲಿಕೆಯ ವಾರ್ಡ್‌ಗಳಿಗೆ ಮೀಸಲಾತಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜನವರಿ 8ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ