Breaking News

ಬಂಡೀಪುರದಲ್ಲಿ ನಟ ಗಣೇಶ್ ಕಾಂಪೌಂಡ್ ಕಾಮಗಾರಿಗೆ ಆಕ್ಷೇಪ; ನೊಟೀಸ್ ಜಾರಿ

Spread the love

ಚಾಮರಾಜನಗರ : ಬಂಡೀಪುರ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡಕ್ಕೆ ಅಡಿಪಾಯ ಹಾಕಿದ್ದಾರೆ ಎಂಬ ಪರಿಸರವಾದಿಗಳ ಆಕ್ಷೇಪದ ಹಿನ್ನೆಲೆಯಲ್ಲಿ ನಟ ಗಣೇಶ್​ ಅವರಿಗೆ ಬಂಡೀಪುರ ಸೂಕ್ಷ್ಮ ವಲಯ ಪರಿಸರ ಸಮಿತಿ ಸದಸ್ಯ ಕಾರ್ಯದರ್ಶಿ ನೊಟೀಸ್​ ನೀಡಿದ್ದಾರೆ. ಮುಂದಿನ 7 ದಿನಗಳೊಳಗೆ ಸೂಕ್ತ ದಾಖಲಾತಿ ಒದಗಿಸಬೇಕು. ಅಲ್ಲಿಯವರೆಗೂ ಕಾಮಗಾರಿ ನಿಲ್ಲಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಪರಿಸರವಾದಿಗಳ ಆಕ್ಷೇಪ: ಅಭಯಾರಣ್ಯಕ್ಕೆ ಹೊಂದಿಕೊಂಡಂತಿರುವ ಜಕ್ಕಳ್ಳಿ ಗ್ರಾಮದ ಸರ್ವೇ ನಂ. 105ರಲ್ಲಿ 1.24 ಎಕರೆ ಜಮೀನು ಖರೀದಿಸಿರುವ ಗಣೇಶ್, ಸ್ವಂತ ವಾಸಕ್ಕೆ ಮನೆ ಹಾಗೂ ಸುತ್ತಲೂ ಕಾಂಪೌಂಡ್ ನಿರ್ಮಿಸುವ ಕುರಿತು ಹೇಳಿದ್ದರು. ಅರಣ್ಯ ಅಧಿಕಾರಿಗಳು 2022ರ ಜೂನ್​ ತಿಂಗಳಿನಲ್ಲಿ ಈ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ಅನುಮತಿ ನೀಡಿದ್ದರು. ಆದರೆ ಈಗ ಆ ಜಾಗದಲ್ಲಿ ಜೆಸಿಬಿ ಮೂಲಕ ದೊಡ್ಡ ಮಟ್ಟದ ಕೆಲಸ ನಡೆಯುತ್ತಿದ್ದಾರೆ ಎನ್ನುವುದು ಪರಿಸರವಾದಿಗಳ ಆಕ್ಷೇಪವಾಗಿದೆ. ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಆ ರೀತಿಯ ಕಟ್ಟಡಕ್ಕೆ ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ‌ ಇಲಾಖೆಯ ಅಧಿಕಾರಿಗಳು ಮುಚ್ಚಳಿಕೆ ಪತ್ರ, ಕಂದಾಯ ದಾಖಲಾತಿ ಸೇರಿದಂತೆ ಜಮೀನಿಗೆ ಸಂಬಂಧಿಸಿದ ಎಲ್ಲ ವಿವರಗಳನ್ನೂ ಮುಂದಿನ ಏಳು ದಿನಗಳೊಳಗೆ ಸಲ್ಲಿಸುವಂತೆ ಗಣೇಶ್‌ ಅವರಿಗೆ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ