Breaking News

ಲಕ್ಷ್ಮಣ ಸವದಿ ಅವರ ಪ್ರತಿಕೃತಿ ದಹನ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿ ತಮ್ಮ ಪುಂಡಾಟ ಹೆಚ್ಚಿಸಿದಶಿವಸೇನೆ ಪುಂಡರು

Spread the love

ಬೆಳಗಾವಿ : ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಹೇಳಿಕೆಗೆ  ಮಹಾರಾಷ್ಟ್ರ ಶಿವಸೇನೆ ಪುಂಡರು ರಾಷ್ಟ್ರೀಯ ಹೆದ್ದಾರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ನಗರದಲ್ಲಿ ಶನಿವಾರ ಡಿಸಿಎಂ ಲಕ್ಷ್ಮಣ ಸವದಿ ಮಹಾರಾಷ್ಟ್ರ ಸಚಿವರು ಬೆಳಗಾವಿ ಗಡಿ ಮರಾಠಿಗರಿಗೆ ನೀಡಿದ ಕರಾಳ ದಿನ ಕರೆ ಪತ್ರಕ್ಕೆ ಪ್ರತಿಕ್ರಿಸಿ, ಯಾರು ಎಷ್ಟೇ ಹೇಳಿದರು, ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಎಂದು ಹೇಳಿದ್ದರು.
ಇದಕ್ಕೆ ಆಕ್ರೋಶಗೊಂಡ ಮಹಾರಾಷ್ಟ್ರ ಶಿವಸೇನೆ ಕಾರ್ಯಕರ್ತರು ಇಂದು ಬೆಳಗಾವಿ ಗಡಿ ತಾಲ್ಲೂಕು ನಿಪ್ಪಾಣಿ ರಸ್ತೆ ತಡೆದು, ಪ್ರತಿಭಟನೆ ನಡೆಸುವ ಮೂಲಕ ತಮ್ಮ ಪುಂಡಾಟಿಕೆ ಮೆರೆದಿದ್ದಾರೆ.
ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ದೇಶದ್ರೋಹಿ ಘೋಷಣೆ ಕೂಗಿವ ಮೂಲಕ ರಾಜ್ಯ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿ ತಮ್ಮ ಪುಂಡಾಟ ಹೆಚ್ಚಿಸಿದ್ದಾರೆ. 

Spread the love

About Laxminews 24x7

Check Also

ತಮ್ಮ ವಿರುದ್ದ ದಾಖಲಾಗಿರುವ ಎಫ್​ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ

Spread the loveಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ