Home / ರಾಜಕೀಯ / ಸಿಎಂ ಸಿದ್ದರಾಮಯ್ಯ ಭೇಟಿಯಾದ ಎಸ್​ಟಿ ಸೋಮಶೇಖರ್

ಸಿಎಂ ಸಿದ್ದರಾಮಯ್ಯ ಭೇಟಿಯಾದ ಎಸ್​ಟಿ ಸೋಮಶೇಖರ್

Spread the love

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಜೊತೆ ವೇದಿಕೆ ಹಂಚಿಕೊಂಡು ರಾಜಕೀಯ ಚರ್ಚೆಯ ಕೇಂದ್ರ ಬಿಂದುವಾಗಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಆಪರೇಷನ್ ಹಸ್ತದ ಚರ್ಚೆ ನಡುವೆ ಸೋಮಶೇಖರ್ ಅವರ ಈ ನಡೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದೆ.

ಮಾಜಿ ಸಚಿವ ಹಾಗೂ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುಮಾರಪಾರ್ಕ್ ಈಸ್ಟ್​​ನಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಸೋಮಶೇಖರ್​ ತಮ್ಮ ಕ್ಷೇತ್ರದ ಅಭಿವೃದ್ಧಿ ವಿಷಯದ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಕಾಮಗಾರಿಗಳು, ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಸಿಎಂಗೆ ಮನವಿ ಪತ್ರ ಸಲ್ಲಿಸಿದರು. ‘ಇದು ರಾಜಕೀಯ ಕಾರಣದ ಭೇಟಿಯಲ್ಲ, ಕೇವಲ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಸೀಮಿತವಾದ ಭೇಟಿ ಎಂದು ಎಸ್​ ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ