ಲೋಕಸಭಾ ಟಿಕೆಟ್ ಗಾಗಿ ಬೆಳೆಗಾವಿ ಬಿಜೆಪಿಯಲ್ಲಿ ಪೈಪೋಟಿ ಹೇಗಿದೆ ಬನ್ನಿ ನೋಡಣ
ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪೈಪೋಟಿ ಆರಂಭವಾಗಿದೆ
ಈಗಾಗಲೇ ಮಾಜಿ ಶಾಸಕರಾದ ಸಂಜಯ ಪಾಟೀಲ್, ಅನಿಲ್ ಬೆನಕೆ, ಮಾಜಿ ಎಂಎಲಸಿ ಮಹಾಂತೇಶ ಕವಟಗಿಮಠ, ಬಿಎಸವೈ ಆಪ್ತ ಶಂಕರಗೌಡ ಪಾಟೀಲ್ ಲಾಬಿ ನಡೆಸಿದ್ದಾರೆ
ಇನ್ನೂ ಗೋಕಾಕ, ಅರಬಾವಿ, ರಾಮದುರ್ಗ, ಸವದತ್ತಿ, ಬೈಲಹೊಂಗಲ ತಾಲ್ಲೂಕಿನಲ್ಲಿ ಲಿಂಗಾಯತ ಮತಗಳೇ ಪ್ರಾಬಲ್ಯ ಇರುವುದರಿಂದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಲೋಕಸಭೆ ಸ್ಫರ್ಧೆಗೆ ಇಂಗಿತ ಹೊರ ಹಾಕಿದ್ದಾರೆ .
ಒಟ್ಟಾರಗಿ ದೆಹಲಿ ವರಿಷ್ಠರನ್ನ ಭೇಟಿ ಮಾಡ್ತಿರೋ ಬೆಳಗಾವಿ ಬಿಜೆಪಿ ನಾಯಕರು ಲಿಂಗಾಯತ, ಮರಾಠಾ ಮತಗಳೇ ನಿರ್ಣಾಯಕವಾದ ಕ್ಷೇತ್ರದಲ್ಲಿ ಬಿಜೆಪಿ ಭದ್ರಕೋಟಿಯಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಸಿಗುತ್ತೇದೆ ಅನ್ನುವುದು ಕಾದುನೋಡಬೇಕು ಅಷ್ಟೇ