ಲಖನೌ, ಉತ್ತರ ಪ್ರದೇಶ : ನಾವು ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಯಾರೆಂಬುದು ನಿರ್ಧರಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಪಿಎಲ್ ಪುನಿಯಾ ಹೇಳಿದ್ದಾರೆ.
ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಸಮ್ಮಿಶ್ರದಿಂದ ಚುನಾಯಿತ ಸಂಸದರು ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ ಎಂದು ಪಿಎಲ್ ಪುನಿಯಾ ಹೇಳಿದರು.
2024 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಯನ್ನು ಎದುರಿಸಲು ಒಗ್ಗಟ್ಟಿನ ತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ಸಭೆ ಸೇರಿದ್ದವು. ಇಂಡಿಯಾ ಅಥವಾ ‘ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿ’ ಎಂಬುದು ಕಾಂಗ್ರೆಸ್ ಸೇರಿದಂತೆ 26 ವಿರೋಧ ಪಕ್ಷಗಳ ಒಂದು ಗುಂಪು. ಪಿಎಂ ಮೋದಿಯವರ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್ಡಿಎ) ಎದುರಿಸಲು ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಮೂರನೇ ಬಾರಿಗೆ ಸತತವಾಗಿ ಬಿಜೆಪಿ ಗೆಲ್ಲುವುದನ್ನು ತಡೆಯಲು ವಿರೋಧ ಪಕ್ಷಗಳು ಒಗ್ಗೂಡಿವೆ.
ಇಂಡಿಯಾ ಮೈತ್ರಿಕೂಟದ ಮೊದಲ ಸಭೆಯನ್ನು ಜೂನ್ 23 ರಂದು ಬಿಹಾರದ ಪಾಟ್ನಾದಲ್ಲಿ ನಡೆಸಲಾಯಿತು ಮತ್ತು ಎರಡನೇ ಸಭೆಯನ್ನು ಜುಲೈ 17-18 ರಂದು ಕರ್ನಾಟಕದ ಬೆಂಗಳೂರಿನಲ್ಲಿ ನಡೆಸಲಾಯಿತು. ಮೂರನೇ ಸಭೆಯನ್ನು ಇತ್ತಿಚೇಗೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆಸಲಿದೆ.