ಕೋಲಾರ: ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕ ಚಾಕುವಿನಿಂದ ತನ್ನ ಚಿಕ್ಕಪ್ಪನನ್ನೇ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಜಿಲ್ಲೆಯ ಮಾಲೂರು ತಾಲೂಕಿನ ಬೆನ್ನಘಟ್ಟ ಗ್ರಾಮದಲ್ಲಿ ಘಟನೆ ನಡೆದಿದ್ದು, ತಮಿಳುನಾಡು ಗಡಿಯಲ್ಲಿ ಹೆಚ್ಚು ಸಿಗುವ ಗಾಂಜಾವನ್ನ ಅಪ್ಪ-ಮಗ ಹೊಡೆದಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದು, ಕುಡಿದ ಅಮಲಿನಲ್ಲಿ ಅಪ್ರಾಪ್ತ ಚಿಕ್ಕಪ್ಪ ವಿಜಯ್ ಕುಮಾರ್ ನನ್ನೇ ಕೊಲೆ ಮಾಡಿದ್ದಾನೆ.