Breaking News

ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡರ್‌ ಇಳಿಸಿದ ಮೊದಲ ದೇಶ ಭಾರತ! ಇತಿಹಾಸ ಸೃಷ್ಟಿಸಿದ ಇಸ್ರೋ!

Spread the love

ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಭಾರತ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿತು.

ಇಡೀ ವಿಶ್ವವೇ ಎದುರು ನೀಡುತ್ತಿದ್ದ ಚಂದ್ರಯಾನ-3 ಗಗನ ನೌಕೆಯ ಲ್ಯಾಂಡರ್‌ ವಿಕ್ರಮ್‌ ಅನ್ನು ಇಸ್ರೋ ವಿಜ್ಞಾನಿಗಳು ಸಂಜೆ 6:04ಕ್ಕೆ ಸರಿಯಾಗಿ ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡಿಂಗ್ ಮಾಡಿದರು. ಈ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು.

 

 

ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್‌ ಬ್ಯಾಹಾಕಾಶ ಕೇಂದ್ರದಿಂದ ಭಾರತದ ಚಂದ್ರಯಾನ-3 ಗಗಮನೌಕೆಯನ್ನು ಇಸ್ರೋ ಯಶಸ್ವಿಯಾಗಿ ಉಡಾಯಿಸಿತ್ತು. ಅಂದಿನಿಂದ ಯೋಜನೆಯ ಯಶಸ್ಸಿಗಾಗಿ ಭಾರತ ಮಾತ್ರವಲ್ಲದೇ ಜಗತ್ತು ಹಾರೈಸಿ ಕಾತುರದಿಂದ ಕಾಯುತ್ತಿತ್ತು. ಭೂಮಿಯಿಂದ ನಭಕ್ಕೆ ಚಿಮ್ಮಿದ 41ನೇ ದಿನದ ನಂತರ ಇಂದು ಸಂಜೆ ಚಂದ್ರನನ್ನು ವಿಕ್ರಮ್‌ ಲ್ಯಾಂಡರ್‌ ಸ್ಪರ್ಶಿಸಿತು. ಈ ಮೂಲಕ ಭಾರತದ ಹೆಜ್ಜೆ ಗುರುತುಗಳು ಚಂದ್ರನೂರಿನಲ್ಲಿ ಮೂಡಿವೆ.

 

 

ಇಂದು ಸಂಜೆ ಸರಿಯಾಗಿ 5:20ಕ್ಕೆ ಚಂದ್ರನ ಮೇಲೆ ಲ್ಯಾಂಡರ್​ ಇಳಿಸುವ ಪ್ರಕ್ರಿಯೆಯನ್ನು ಇಸ್ರೋ ವಿಜ್ಞಾನಿಗಳು ಆರಂಭಿಸಿದ್ದರು. ಈ ಕೆಲಸ ಆರಂಭವಾಗುತ್ತಿದ್ದಂತೆ ಕೋಟ್ಯಂತರ ಭಾರತೀಯರ ಎದೆ ಬಡಿತವೂ ಕೂಡ ಹೆಚ್ಚುತ್ತಿತ್ತು. ಜಗತ್ತೇ ಕೂತುಹಲದಿಂದ ಎದುರು ನೋಡುತ್ತಿದ್ದ ಐತಿಹಾಸಿಕ ಪ್ರಕ್ರಿಯೆಯನ್ನು ಇಸ್ರೋ ನೇರಪ್ರಸಾರ ಮಾಡಿತ್ತು. ಗಣ್ಯರು ಸೇರಿದಂತೆ ಜನಸಾಮಾನ್ಯರೂ ಸಹ ವೀಕ್ಷಿಸುತ್ತಾ, ಎಲ್ಲೆಡೆ ಲ್ಯಾಂಡರ್‌ ಚಂದ್ರನ ಮೇಲೆ ‘ಮೃದು ಲ್ಯಾಂಡಿಂಗ್​ ಆಗಲಿ’ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದರು.

ಅಂತಿಮವಾಗಿ ಕೋಟ್ಯಂತರ ಜನರ ಆಶಯ, ಪ್ರಾರ್ಥನೆ ಫಲಿಸಿದೆ. ನಿಗದಿತ ಸಮಯದಂತೆ ಸಂಜೆ 6 ಗಂಟೆ 4 ನಿಮಿಷಕ್ಕೆ ಸರಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್​ ಇಳಿಯುವ ಮೂಲಕ ತನ್ನ ಪರಾಕ್ರಮ ಮರೆಯಿತು. ಚಂದ್ರನಿಗೆ ಸನಿಹವಾಗುತ್ತಿದ್ದಂತೆ ಹಾರಿಜಾಂಟರ್​ ಮಾದರಿಯಿಂದ ವರ್ಟಿಕಲ್​ ಮಾದರಿಗೆ ಲ್ಯಾಂಡರ್​ ಬಂದು ಚಂದ್ರನನ್ನು ಚುಂಬಿಸಿತು. ಭಾರತದ ಚಂದ್ರ ಚುಂಬನ ಯಶಸ್ವಿಯಾಗುತ್ತಿದ್ದಂತೆ ಇಸ್ರೋ ವಿಜ್ಞಾನಿಗಳು ಸಂಭ್ರಮಾಚರಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ