Breaking News

21 ನಾಯಕರನ್ನೊಳಗೊಂಡ ಜೆಡಿಎಸ್ ಕೋರ್ ಕಮಿಟಿ ರಚನೆ, ಜಿಟಿ ದೇವೇಗೌಡ ಅಧ್ಯಕ್ಷ

Spread the love

ಬೆಂಗಳೂರು, (ಆಗಸ್ಟ್ 18): ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಮುಗ್ಗರಿಸಿರುವ ಜೆಡಿಎಸ್​ ಇದೀಗ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಸ್ಥಳೀಯ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿದೆ. ಹೀಗಾಗಿ ಪಕ್ಷವನ್ನು ಬಲಪಡಿಸಲು ಇಂದು ಜೆಡಿಎಸ್​ ಕೋರ್ ಕಮಿಟಿ(jds core committee) ರಚನೆ ಮಾಡಲಾಗಿದೆ. ಒಟ್ಟು 21 ಜೆಡಿಎಸ್ (JDS) ನಾಯಕರನ್ನೊಳಗೊಂಡ ಕೋರ್ ಕಮಿಟಿಗೆ ಚಾಮುಂಡೇಶ್ವರಿ ಶಾಸಕ ಜಿಟಿ ದೇವೇಗೌಡ ಅವರು ಜೆಡಿಎಸ್​ ಕೋರ್​ ಕಮಿಟಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಜೆಡಿಎಸ್​​ ಕೋರ್​ ಕಮಿಟಿ ಸಂಚಾಲಕರಾಗಿ ವೈಎಸ್​​ವಿ ದತ್ತಾ ಆಯ್ಕೆಯಾಗಿದ್ದಾರೆ. ಇನ್ನು ಸಾ.ರಾ.ಮಹೇಶ್, ಬಂಡೆಪ್ಪ ಕಾಶಂಪುರ, ಹೆಚ್.ಕೆ‌.ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಆಲ್ಕೋಡ್ ಹನುಮಂತಪ್ಪ, ಬಿ‌.ಎಂ.ಫಾರೂಕ್, ರಾಜುಗೌಡ, ನೇಮಿರಾಜ್ ನಾಯ್ಕ್, ಎಂ.ಕೃಷ್ಣರೆಡ್ಡಿ, ದೊಡ್ಡಪ್ಪಗೌಡ S.ಪಾಟೀಲ್, ಕೆ.ಎಂ.ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲರವಿ, ಪ್ರಸನ್ನ ಕುಮಾರ್, ಸುನಿತಾ ಚೌಹಾಣ್​​, ಸಿ.ವಿ.ಚಂದ್ರಶೇಖರ್, ಸುಧಾಕರ್ ಶೆಟ್ಟಿ, ಸೂರಜ್ ಸೋನಿ ನಾಯಕ್ JDS ಕೋರ್ ಕಮಿಟಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.


Spread the love

About Laxminews 24x7

Check Also

ಗೋಮಾಳದಲ್ಲಿ ಅವೈಜ್ಞಾನಿಕ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಯತ್ನ: ವಿರೋಧಿಸಿ ತಹಶಿಲ್ದಾರ್ ಕಚೇರಿಗೆ ಕುರಿ ನುಗ್ಗಿಸಿ ಪ್ರತಿಭಟನೆ

Spread the loveದಾವಣಗೆರೆ: ಗೋಮಾಳ‌ ಜಾಗವನ್ನು ಸರ್ಕಾರಿ ಕಟ್ಟಡ ನಿರ್ಮಾಣ ಮಾಡಲು ಮಂಜೂರು ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ದಾವಣಗೆರೆ ಜಿಲ್ಲೆಯ ನ್ಯಾಮತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ