Breaking News

ಹುಬ್ಬಳ್ಳಿ ಅಂಕೋಲಾ ರೈಲು ಯೋಜನೆ ಪ್ರಶ್ನಿಸಿ ಪರಿಸರವಾದಿಗಳು ಸಲ್ಲಿಸಿದ್ದ ಅರ್ಜಿ ವಿಲೇವಾರಿ

Spread the love

ಬೆಂಗಳೂರು: ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅಭಿಪ್ರಾಯದಂತೆ ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗದ ಕುರಿತು ಪರಿಷ್ಕೃತ ಯೋಜನೆಯನ್ನು ಸಲ್ಲಿಸುವುದಾಗಿ ನೈಋತ್ಯ ರೈಲ್ವೆ ವಲಯ ಸಲ್ಲಿಸಿದ ಪ್ರಮಾಣ ಪರಿಗಣಿಸಿರುವ ಹೈಕೋರ್ಟ್, ಹುಬ್ಬಳ್ಳಿ – ಅಂಕೋಲಾ ನಡುವಿನ ಬ್ರಾಡ್ ಗೇಜ್ ರೈಲು ಮಾರ್ಗ ಯೋಜನೆಗೆ ಮುಂದಾಗಿದ್ದ ಕ್ರಮವನ್ನು ಪ್ರಶ್ನಿಸಿ ಪರಿಸರವಾದಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿದೆ.

 

ಹುಬ್ಬಳ್ಳಿ- ಅಂಕೋಲಾ ನಡುವೆ 164.44 ಕಿ.ಮೀ ಉದ್ದದ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಇದಾಗಿದೆ. ಈ ಯೋಜನೆಗೆ ಕರ್ನಾಟಕ ವನ್ಯಜೀವಿ ಮಂಡಳಿ 2020ರ ಮಾರ್ಚ್​​ 20ರಂದು ಅನುಮತಿ ನೀಡಿರುವುದನ್ನು ಆಕ್ಷೇಪಿಸಿ ಪ್ರಾಜೆಕ್ಟ್ ವೃಕ್ಷ ಫೌಂಡೇಷನ್ ಮತ್ತು ಗಿರಿಧರ್ ಕುಲಕರ್ಣಿ ಎಂಬುವರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಎಂಜೆಎಸ್ ಕಮಲ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.

ಈ ವೇಳೆ, ರೈಲ್ವೆ ಸಚಿವಾಲಯವನ್ನು ಪ್ರತಿನಿಧಿಸುವ ವಕೀಲರು, ನೈಋತ್ಯ ರೈಲ್ವೆ ವಲಯದ ಡೆಪ್ಯೂಟಿ ಚೀಫ್ ಎಂಜಿನಿಯರ್ ಸಿ.ಪಿ. ರೆಡ್ಡಿ ಪರವಾಗಿ ಪ್ರಮಾಣಪತ್ರ ಸಲ್ಲಿಸಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ಸಲ್ಲಿಸಿದೆ.

2020ರ ಮಾರ್ಚ್​ 20ರಂದು ರಾಜ್ಯ ವನ್ಯಜೀವಿ ಮಂಡಳಿ ಕೈಗೊಂಡಿರುವ ನಿರ್ಣಯ ಆಧರಿಸಿ ಹುಬ್ಬಳ್ಳಿ- ಅಂಕೋಲಾ ರೈಲು ಯೋಜನೆ ಸಂಬಂಧ ಮುಂದಿನ ಕ್ರಮ ಜರುಗಿಸಬಾರದು ಎಂದು ಸರ್ಕಾರಕ್ಕೆ ಸೂಚಿಸಿ 2020ರ ಜೂನ್​ 18ರಂದು ಹೈಕೋರ್ಟ್ ಮಧ್ಯಂತರ ಆದೇಶ ಮಾಡಿತ್ತು. ನಂತರ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಿಸುತ್ತ ಬಂದಿತ್ತು. ಇದೀಗ ಹೈಕೋರ್ಟ್ ಇತ್ಯರ್ಥಪಡಿಸಿದೆ.

 


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ