ಬೆಳಗಾವಿ: ಇಂದು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಮಹಿಳಾ ಭಕ್ತರಿಗೆ ಅರಿಶಿಣ, ಕುಂಕುಮ, ಹಸಿರು ಬಳೆ ವಿತರಿಸಲಾಯಿತು. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸರ್ಕಾರದ ಆದೇಶದಂತೆ ದೇವಸ್ಥಾನದಲ್ಲಿ ಶಾಸಕ ವಿಶ್ವಾಸ ವೈದ್ಯ ಅರಿಶಿಣ, ಕುಂಕುಮ, ಹಸಿರು ಬಳೆ ವಿತರಿಸಿದರು.
ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಕಾರ್ಯನಿರ್ವಾಹಕ ಅಧಿಕಾರಿ ಎಸ್ಪಿಬಿ ಮಹೇಶ ಸೇರಿ ಮತ್ತಿತರರು ಉಪಸ್ಥಿತರಿದ್ದರು. ವಿಶೇಷ ಉಡುಗೊರೆ ಪಡೆದುಕೊಂಡ ಭಕ್ತೆಯರು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಪ್ರಯಾಣ ಮಾಡಿದ್ದ ಸರ್ಕಾರ ಈಗ ಉಡಿ ವಸ್ತುಗಳನ್ನು ವಿತರಿಸಿದ್ದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಮಹಿಳೆಯರಿಗೆ ಅರಿಶಿಣ-ಕುಂಕುಮ ವಿತರಣೆ
ಯಲ್ಲಮ್ಮ ದೇವಿಗೆ ವಿಶೇಷ ಪೂಜೆ: ವರಮಹಾಲಕ್ಷ್ಮೀ ಹಬ್ಬದ ಸಲುವಾಗಿ ಸವದತ್ತಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಯಲ್ಲಮ್ಮನ ಸನ್ನಿಧಿಗೆ ಭಕ್ತರ ದಂಡೇ ಹರಿದು ಬಂದಿತ್ತು.
ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್ಪಿಬಿ ಮಹೇಶ ಮಾತನಾಡಿ, “ನಮ್ಮ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಅರಿಶಿಣ, ಕುಂಕುಮ, ಹಸಿರು ಬಳೆ, ಹೂವು ತುಂಬಾ ಪವಿತ್ರ ಮತ್ತು ಶ್ರೇಷ್ಠವಾದ ವಸ್ತುಗಳು. ಹಾಗಾಗಿ ರಾಜ್ಯ ಸರ್ಕಾರದ ಆದೇಶದಂತೆ ಇಂದು ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ಈ ಎಲ್ಲ ವಸ್ತುಗಳನ್ನು ವಿತರಿಸುತ್ತಿದ್ದೇವೆ” ಎಂದರು.
ವರಮಹಾಲಕ್ಷ್ಮೀ ಹಬ್ಬ