Breaking News

ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ 1 ಗಗನನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ

Spread the love

ತಿರುವನಂತಪುರಂ (ಕೇರಳ) : ಚಂದ್ರಯಾನ-3 ಬಾಹ್ಯಾಕಾಶ ಯೋಜನೆಯ ಲ್ಯಾಂಡರ್ ‘ವಿಕ್ರಮ್’ ಈಗಾಗಲೇ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್​ ಆಗಿದ್ದು, ವೈಜ್ಞಾನಿಕ ಸಂಶೋಧನೆಗಳ ಕೆಲಸ ಪ್ರಾರಂಭಿಸಿದೆ.

ಇದರ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳು ತಮ್ಮ ಮುಂದಿನ ಗಮನವನ್ನು ಸೂರ್ಯನತ್ತ ಕೇಂದ್ರೀಕರಿಸಿದ್ದು, ದೇಶದ ಮೊದಲ ಸೌರ ಮಿಷನ್ ಆದಿತ್ಯ ಎಲ್ 1 ಉಡಾವಣೆಗೆ ಸಿದ್ಧವಾಗಿದೆ. ಈ ನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಖ್ಯಸ್ಥ ಎಸ್‌. ಸೋಮನಾಥ್ ಶನಿವಾರ ತಿಳಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಇಸ್ರೋ ಮುಖ್ಯಸ್ಥರು, “ಆದಿತ್ಯ ಎಲ್ 1 ಉಪಗ್ರಹ ಸಿದ್ಧವಾಗಿದೆ. ಈಗಾಗಲೇ ಶ್ರೀಹರಿಕೋಟಾವನ್ನು ತಲುಪಿದ್ದು, ಪಿಎಸ್‌ಎಲ್‌ವಿಗೆ ಸಂಪರ್ಕ ಹೊಂದಿದೆ. ಇಸ್ರೋದ ಮುಂದಿನ ಗುರಿ ಆದಿತ್ಯ ಎಲ್ 1ರ ಯಶಸ್ವಿ ಉಡಾವಣೆ. ಈ ಕಾರ್ಯ ಸೆಪ್ಟೆಂಬರ್ ಮೊದಲ ವಾರದಲ್ಲೇ ನಡೆಯಲಿದೆ. ಮುಂದಿನ ಎರಡು ದಿನಗಳಲ್ಲಿ ದಿನಾಂಕ ಪ್ರಕಟಿಸಲಾಗುವುದು” ಎಂದು ಹೇಳಿದರು.

ಆದಿತ್ಯ-L1 ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ. ಇದು ಭೂಮಿಯಿಂದ ಸರಿಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಸೂರ್ಯನ ಲ್ಯಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ನೆಲೆಗೊಳ್ಳಲಿದೆ. ಉಡಾವಣೆಯ ಬಳಿಕ L1 ಪಾಯಿಂಟ್‌ಗೆ ಪ್ರಯಾಣಿಸಲು ಸುಮಾರು 120 ದಿನಗಳನ್ನು ತೆಗೆದುಕೊಳ್ಳುತ್ತದೆ. ಆ ಬಳಿಕ ಸೂರ್ಯನ ಕುರಿತು ಅಭೂತಪೂರ್ವ ಒಳನೋಟಗಳನ್ನು ಒದಗಿಸುವ ಗುರಿ ಹೊಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ