Breaking News
Home / ರಾಜಕೀಯ / ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ: ಪ್ರಲ್ಹಾದ್ ಜೋಶಿ

ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ: ಪ್ರಲ್ಹಾದ್ ಜೋಶಿ

Spread the love

ಕೋವಿಡ್ ಸೇರಿದಂತೆ ಇತರ ಹಗರಣಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ನೇಮಿಸಿದರುವ ನ್ಯಾಯಾಧೀಶ ಕಾಂಗ್ರೆಸ್’ನವರೇ ಅಗಿದ್ದಾರೆ. ದಿನಂಪ್ರತಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವುದೇ ಕಾಯಕವಾಗಿದೆ.

ಅಂತವರಿಂದ ತನಿಖೆ ಮಾಡಿಸುವ ಬದಲು ನೇರವಾಗಿ ಎಫ್ಐಆರ್ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಐ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ಆಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ಕುರಿತ ಪಾರದರ್ಶಕ ತನಿಖೆಗೆ ನಮ್ಮ ಅಭ್ಯಂತರವಿಲ್ಲ ಎಂದು ತಿಳಿಸಿದರು.

 

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಯುಪಿಎ ಹೆಸರನ್ನು ಬದಲಾವಣೆ ಮಾಡಿದ್ದು, ಬ್ರ್ಯಾಂಡ್ ಕೆಟ್ಟು ಹೋದ ಸಂದರ್ಭದಲ್ಲಿ ಹೇಗೆ ಅಂಗಡಿ, ಫ್ಯಾಕ್ಟರಿ ಹೆಸರು ಬದಲಾವಣೆ ಮಾಡುತ್ತೇವೆ‌. ಹಾಗೇಯೇ ಕಾಂಗ್ರೆಸ್ ಯುಪಿಐ ಬದಲಾವಣೆ ಇಂಡಿಯಾ ಎಂದು ಬ್ರ್ಯಾಂಡ್ ಬದಲಾವಣೆ ಮಾಡಿದೆ. ಆದರೆ ಪ್ರಾಡಕ್ಟ್ ಮಾತ್ರ ಅದೇ ಇದೆ ಎಂದು ಗೇಲಿ ಮಾಡಿದರು.

ಚಂದ್ರಯಾನದ ಯಶಸ್ಸು ದೇಶದ ವಿಜ್ಞಾನಿ ಹಾಗೂ ಯುವಜನರ ಉತ್ಸಾಹವನ್ನು ಹೆಚ್ಚಿಸಿದೆ. ಸ್ವಾತಂತ್ರ್ಯ ಸಿಕ್ಕ 100 ವರ್ಷದೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ