Breaking News

ಧಾರವಾಡ ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ

Spread the love

ಧಾರವಾಡ : ಜಿಲ್ಲೆಯಲ್ಲಿ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಎಂಬ ಮಾಹಿತಿಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

 

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ಜಿಲ್ಲೆಯಲ್ಲಿ ಬಿಜೆಪಿಗರು ಕಾಂಗ್ರೆಸ್​ಗೆ ಬರುತ್ತಿದ್ದಾರೆ. ಹಾಗೇ ಧಾರವಾಡ ಜಿಲ್ಲೆಯಲ್ಲಿ ಇಬ್ಬರು ಬಿಜೆಪಿಗರು ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ. ಬಿಜೆಪಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕುಂದಗೋಳ ಮಾಜಿ ಶಾಸಕ ಚಿಕ್ಕನಗೌಡ ಕಾಂಗ್ರೆಸ್ ಪಕ್ಷಕ್ಕೆ‌ ಬರ್ತಾರೆ ಎಂದು ಮಾಹಿತಿಯಿದೆ ಎಂದು ಲಾಡ್ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಬಿಜೆಪಿ ಅವಧಿಯ ಹಗರಣಗಳ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆ ಎಲ್ಲವನ್ನು ತನಿಖೆ ಮಾಡಲಾಗುತ್ತಿದೆ. ವಿಪಕ್ಷದಲ್ಲಿದ್ದಾಗ ನಾವು ತನಿಖೆ ಮಾಡಲು ಒತ್ತಾಯ ಮಾಡಿದ್ದೇವೆ. ಆದರೆ ಈಗ ನಮ್ಮದೇ ಆಡಳಿತವಿದೆ ಅದಕ್ಕೆ ತನಿಖೆ ಮಾಡಲಾಗುತ್ತದೆ. ಅದರಲ್ಲೂ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ ಎಂದು ಸಚಿವರು ಆರೋಪಿಸಿದರು.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ