Breaking News

ಸಾಲಾಬಾಧೆಯಿಂದ ಹಾವೇರಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆ.

Spread the love

ಹಾವೇರಿ : ಜಿಲ್ಲೆಯಲ್ಲಿ ರವಿವಾರ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿಯಲ್ಲಿ ಗಿರೀಶ್ ಮುರ್ಡೆಪ್ಪನವರ್ ಮೃತಪಟ್ಟಿದ್ದರೆ, ಮತ್ತೊಂದು ಕಡೆ ಬ್ಯಾಡಗಿ ತಾಲೂಕಿನ ಶೀಡೆನೂರು ಗ್ರಾಮದ ನಾಗೇಶಪ್ಪ ಕೊಡಗದ್ದಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

ಗಿರೀಶ್ ಬ್ಯಾಂಕ್‌ನಲ್ಲಿ ನಾಲ್ಕು ಲಕ್ಷ ರೂಪಾಯಿ ಸಾಲ ಮತ್ತು ಸೊಸೈಟಿಯಲ್ಲಿ ಎರಡು ಲಕ್ಷ ಮತ್ತು ಕೈಗಡ ಒಂದೂವರೆ ಲಕ್ಷ ಸಾಲ ಮಾಡಿದ್ದ. ತಮ್ಮ ಮನೆಯಲ್ಲಿ ಗಿರೀಶ್ ಸಾವಿಗೆ ಶರಣಾಗಿದ್ದಾರೆ. ಈ ಕುರಿತಂತೆ ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ನಾಗೇಶಪ್ಪ ಒಂದು ಬ್ಯಾಂಕ್‌ನಲ್ಲಿ 4 ಲಕ್ಷ ರೂ. ಮತ್ತೊಂದು ಬ್ಯಾಂಕ್‌ನಲ್ಲಿ 3 ಲಕ್ಷ 80 ಸಾವಿರ ಸಾಲ ಮಾಡಿದ್ದರು. ಸಾಲ ತೀರಿಸಲು ವಿಫಲವಾಗಿ ತಮ್ಮ ಮನೆಯ ದನದ ಕೊಟ್ಟಿಗೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗೇಶಪ್ಪ ಆತ್ಮಹತ್ಯೆ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ