Breaking News

ಆಗಸದಲ್ಲಿ ನಿಂತ ಮಗುವಿನ ಉಸಿರು.. ಬೆಂಗಳೂರು – ದೆಹಲಿ ವಿಮಾನ ತುರ್ತು ಭೂಸ್ಪರ್ಶ.. ಕಂದಮ್ಮನ ಪಾಲಿಗೆ ದೇವರಾದ ವೈದ್ಯರು..

Spread the love

ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಬೆಂಗಳೂರು ನವದೆಹಲಿ ವಿಮಾನವನ್ನು ಭಾನುವಾರ ತಡರಾತ್ರಿ ನಾಗಪುರ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್​​ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಗಪುರ, ಮಹಾರಾಷ್ಟ್ರ: ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಬೆಂಗಳೂರಿನಿಂದ ನವದೆಹಲಿಗೆ ತೆರಳಬೇಕಿದ್ದ ವಿಸ್ತಾರಾ ವಿಮಾನವನ್ನು ನಾಗಪುರನಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್​ ಮಾಡಲಾಗಿತ್ತು.

ವಿಮಾನದಲ್ಲಿ 14 ತಿಂಗಳ ಮಗುವಿನ ಹೃದಯ ಸಮಸ್ಯೆ ಇದ್ದು, ಆಕೆಯ ಆರೋಗ್ಯ ಹಠಾತ್ ಹದಗೆಟ್ಟ ಕಾರಣ ವಿಮಾನದಲ್ಲಿದ್ದ ವೈದ್ಯರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುಬೇಕಾಗಿದೆ ಎಂದು ಸೂಚಿಸಿದರು. ಹೀಗಾಗಿ ವಿಮಾನಯಾನದ ಮಾರ್ಗವನ್ನು ಬದಲಾಯಿಸಿದ ಪೈಲಟ್​ಗಳು ನಾಗ್ಪುರ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದರು.

ದೇವರಾದ ಸಹ ಪ್ರಯಾಣಿಕರು: ಮಗುವಿನ ಸ್ಥಿತಿ ಹದಗೆಟ್ಟು ಉಸಿರಾಟ ಸ್ಥಗಿತಗೊಂಡಿದ್ದು, ವಿಮಾನದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಕೂಡಲೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೈದ್ಯರ ಜೊತೆ ಸಹ ಪ್ರಯಾಣಿಕರು ಕೈ ಜೋಡಿಸಿದರು. ಅವರು ತಕ್ಷಣ ಮಗುವಿಗೆ ಸಿಪಿಆರ್ ನೀಡಿದರು ಮತ್ತು ಸಾಧ್ಯವಾದಷ್ಟು ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನು ಮಾಡಿದರು. ಸಿಪಿಆರ್​ ಬಳಿಕ ಮಗು ಉಸಿರಾಡತೊಡಗಿದೆ. ಬಳಿಕ ಲಭ್ಯವಿರುವ ಸಂಪನ್ಮೂಲಗಳ ಸಹಾಯದಿಂದ ಎಲ್ಲರೂ 45 ನಿಮಿಷಗಳ ಕಾಲ ಹೆಣ್ಣು ಮಗುವಿಗೆ ಚಿಕಿತ್ಸೆ ನೀಡಲಾಯಿತು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ