Breaking News

ಸೇತುವೆಯಿಂದ ಬಿದ್ದ ಕಾರು-ಇಬ್ಬರ ಸಾವು

Spread the love

ಕಾರವಾರ: ನಗರದ ಲಂಡನ್ ಬ್ರಿಜ್ ಬಳಿ ಸೇತುವೆಯಿಂದ ಮಂಗಳವಾರ ಬೆಳಗ್ಗೆ ಕಾರೊಂದು ಕೆಳಗೆ ಬಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಕಿರಣ್ (28) ಹಾಗೂ ರಾಕೇಶ್ ಸಿ.ಆರ್ (28) ಎಂದು ಗುರುತಿಸಲಾಗಿದೆ. ಮೃತರು ಚಿಕ್ಕಮಗಳೂರಿನ ನಿವಾಸಿಗಳೆಂದು ತಿಳಿದು ಬಂದಿದೆ. ಕಾರ್ ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಾರು ಅಂಕೋಲಾದಿಂದ ಗೋವಾ ಕಡೆಗೆ ಹೋಗುತ್ತಿದ್ದಾಗ ಈ ಅವಘಡ ನಡೆದಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದ ಬಂದಿಲ್ಲ. ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜೂನ್ ಒಳಗೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ

Spread the loveಕಾರವಾರ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ