Breaking News

ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಭಾರಿ ಮಳೆ ಕೊರತೆಯಿಂದ ಬೆಳೆದ ಬೆಳೆಗಳೆಲ್ಲ ನೀರಿಲ್ಲದೇ ನಾಶ

Spread the love

ಶಿರಸಿ(ಉತ್ತರ ಕನ್ನಡ): ಮಳೆಯ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪೂರ್ವ ಭಾಗದಲ್ಲಿ ಭತ್ತ, ಮೆಕ್ಕೆ ಜೋಳ ಬೆಳೆಗಳು ಒಣಗಿ ಹಾಳಾಗಿದ್ದು, ಹಸಿರಿನಿಂದ ಕಂಗೊಳಿಸಬೇಕಾಗಿದ್ದ ಹೊಲಗಳು ಬರಿದಾಗಿದೆ.

ಇದು ರೈತರನ್ನು ಮಮ್ಮಲ ಮರುವಂತೆ ಮಾಡಿದ್ದು, ಬರಗಾಲ ಘೋಷಣೆ ಮಾಡುವಂತೆ ಆಗ್ರಹ ಹೆಚ್ಚಾಗಿದೆ.

ಬನವಾಸಿ, ಬದನಗೋಡ, ಸಂತೊಳ್ಳಿ ವ್ಯಾಪ್ತಿಯು ಮಳೆಯಾಶ್ರಿತ ಭತ್ತದ ಬೆಳೆಯ ಪ್ರದೇಶವಾಗಿದ್ದು, ಪ್ರಸಕ್ತ ಸಾಲಿನಲ್ಲಿ 2,480 ಹೆಕ್ಟೇರ್ ಭತ್ತ, 1,550 ಹೆಕ್ಟೇರ್​ ಅಡಿಕೆ, ನೂರಾರು ಎಕರೆ ಮೆಕ್ಕೆ ಜೋಳ, ಬಾಳೆ ಬೆಳೆಗಳು ನೀರಿಲ್ಲಿದೇ ಒಣಗುತ್ತಿದೆ. ಇದರಲ್ಲಿ ಪ್ರಮುಖವಾಗಿ ಬದನಗೋಡ ವ್ಯಾಪ್ತಿಯಲ್ಲಿನ ಬೆಳೆಗಳು ಗೋವಿನ ಆಹಾರಕ್ಕೂ ಬಾರದಂತೆ ಒಣಗಿ ಹಾಳಾಗಿದೆ.

ಅಕಾಲಿಕ ಮಳೆ, ಕೊರತೆಯಿಂದ ಅಡಕೆ ಮಿಳ್ಳೆಗಳು ಈ ಹಿಂದೆ ಉದುರಿ ಹಾಳಾಗಿದ್ದವು. ಈಗ ಹಲವೆಡೆ ಅಡಕೆ ಚಂಡೆಗಳು ಹಳದಿಯತ್ತ ತಿರುಗಿದ್ದು, ಇನ್ನೂ ನೀರಿನ ಕೊರತೆಯಾದಲ್ಲಿ ಸಾಯುವ ಆತಂಕ ಎದುರಾಗಿದೆ. ಇದರ ಜೊತೆಗೆ ಎಕರೆಗೆ 15 ರಿಂದ 20 ಸಾವಿರ ರೂ. ಖರ್ಚು ಮಾಡಿ ಬೆಳೆಯಾದ ಭತ್ತ, ಜೋಳ ನಾಶವಾದ ಕಾರಣ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ