Breaking News

‘ಸನಾತನ ಧರ್ಮ’ ಹೇಳಿಕೆಗೆ ನಾನು ಬದ್ಧ, ಯಾವುದೇ ಸವಾಲು ಎದುರಿಸುವೆ: ಉದಯನಿಧಿ ಸ್ಟಾಲಿನ್​

Spread the love

ಚೆನ್ನೈ: ತಮಿಳುನಾಡು ಸಿಎಂ ಸ್ಟಾಲಿನ್​ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ರೋಗಗಳಿಗೆ ಹೋಲಿಸಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ.

‘ತಾನು ನೀಡಿದ ಹೇಳಿಕೆಗೆ ಬದ್ಧವಾಗಿದ್ದು, ಯಾವುದೇ ರೀತಿಯ ಸವಾಲಿಗೆ ಸಿದ್ಧ’ ಎಂದು ಉದಯನಿಧಿ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ಯುವ ಸಚಿವ, ಸನಾತನ ಧರ್ಮ ಕೊರೊನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂ ವೈರಸ್ ಮತ್ತು ಸೊಳ್ಳೆಗಳಿಂದ ಉಂಟಾಗುವ ಜ್ವರವಿದ್ದಂತೆ. ಇಂಥದ್ದನ್ನು ಬೇರು ಸಮೇತ ಕಿತ್ತು ಹಾಕಬೇಕು. ಸನಾತನ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುತ್ತದೆ. ಇದರ ನಿರ್ಮೂಲನೆ ಮಾಡುವುದರ ಮೂಲಕ ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿಕೆ ನೀಡಿದ್ದೆ. ಸನಾತನಿ ಜನರ ಮಾರಣಹೋಮಕ್ಕೆ ಕರೆ ನೀಡಿಲ್ಲ. ಈ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಉದಯ್​ನಿಧಿ ಸ್ಟಾಲಿನ್​ ಸ್ಪಷ್ಟಪಡಿಸಿದ್ದಾರೆ.

 

  •  

 

ಸನಾತನ ಧರ್ಮದ ಬಗ್ಗೆ ನಾನು ಹೇಳಿದ ಪ್ರತಿಯೊಂದು ಮಾತಿಗೂ ಬದ್ಧವಾಗಿದ್ದೇನೆ. ಆ ಧರ್ಮದಿಂದ ತುಳಿತಕ್ಕೊಳಗಾದವರ ಪರವಾಗಿ ಮಾತನಾಡಿದ್ದೇನೆ. ಅದರಿಂದ ಸಮಾಜದ ಮೇಲಾದ ದುಷ್ಪರಿಣಾಮಗಳ ಬಗ್ಗೆ ಹೋರಾಟ ನಡೆಸಿದ ಪೆರಿಯಾರ್ ಮತ್ತು ಅಂಬೇಡ್ಕರ್ ಅವರ ಬರಹಗಳನ್ನು ಯಾವುದೇ ವೇದಿಕೆಯಲ್ಲಿ ಪ್ರಸ್ತುತಪಡಿಸಲು ನಾನು ಸಿದ್ಧನಿದ್ದೇನೆ. ಸನಾತನ ಧರ್ಮವು ಅನೇಕ ಸಾಮಾಜಿಕ ಅನಿಷ್ಟಗಳಿಗೆ ಕಾರಣವಾಗಿದೆ ಎಂಬುದು ನನ್ನ ಅಭಿಮತ. ಹೇಳಿಕೆಗೆ ಬದ್ಧವಾಗಿದ್ದು, ಯಾವುದೇ ಸವಾಲುಗಳಿಗೂ ನಾನು ಸಿದ್ಧನಿದ್ದೇನೆ ಎಂದಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ