Breaking News

ಛಾಯಾಗ್ರಾಹಕನ ವಿರುದ್ಧ ಹಾರ್ಡ್ ಡಿಸ್ಕ್ ಕೊಡದೇ ವಂಚನೆ ಪ್ರಕರಣ: ಆರೋಪ ಅಲ್ಲಗಳೆದ ಸಹ ನಿರ್ಮಾಪಕಿ​

Spread the love

ಬೆಂಗಳೂರು: ಚಿತ್ರೀಕರಣವಾದ ಸಿನಿಮಾ ದೃಶ್ಯಗಳ ಹಾರ್ಡ್ ಡಿಸ್ಕ್ ಕೊಡದೇ, ನಿರ್ಮಾಪಕರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಛಾಯಾಗ್ರಾಹಕನ ವಿರುದ್ಧ ಪ್ರಕರಣ ದಾಖಲಾಗಿದೆ. ‘ಸಮುದ್ರಂ’ ಸಿನಿಮಾದ ನಿರ್ಮಾಪಕಿ ರಾಜಲಕ್ಷ್ಮಿ ನೀಡಿರುವ ದೂರಿನನ್ವಯ ಛಾಯಾಗ್ರಾಹಕ ರಿಷಿಕೇಷ್ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಅನಿತಾ ಭಟ್ ಮುಖ್ಯ ಭೂಮಿಕೆಯಲ್ಲಿರುವ ‘ಸಮುದ್ರಂ’ ಸಿನಿಮಾವನ್ನು ರಾಜಲಕ್ಷ್ಮಿ ಸಿನಿ ಕ್ರಿಯೇಷನ್ಸ್ ಹೆಸರಿನಲ್ಲಿ ನಿರ್ಮಾಣ ಮಾಡಲಾಗುತ್ತಿತ್ತು. ಈ ಚಿತ್ರಕ್ಕೆ ರಿಷಿಕೇಷ್ ಛಾಯಾಗ್ರಾಹಕನಾಗಿದ್ದು, ರಾಜಲಕ್ಷ್ಮಿ ಎಂಬುವವರು ಬಂಡವಾಳ ಹೂಡಿದ್ದರು. ಚಿತ್ರದ ಸಂಗೀತ, ಡಬ್ಬಿಂಗ್, ರೀ – ರೆಕಾರ್ಡಿಂಗ್, ಎಡಿಟಿಂಗ್ ಸೇರಿದಂತೆ ಪ್ರಮುಖ ಜವಬ್ದಾರಿಯನ್ನು ರಿಷಿಕೇಷ್ ವಹಿಸಿಕೊಂಡಿದ್ದ. ಪ್ರತಿಯಾಗಿ ಹಂತ ಹಂತವಾಗಿ 19 ಲಕ್ಷ ರೂಪಾಯಿ ಆನ್‌ಲೈನ್‌ ಮೂಲಕ ಮತ್ತಷ್ಟು ನಗದು ರೂಪದಲ್ಲಿ ಹಣವನ್ನು ನಿರ್ಮಾಪಕರಿಂದ ಪಡೆದುಕೊಂಡಿದ್ದ.

ಆದರೆ, ಅರ್ಧ ಶೂಟಿಂಗ್ ಮುಗಿಯುವಷ್ಟರಲ್ಲೇ ಚಿತ್ರ ತಂಡದಿಂದ ದೂರ ಸರಿದಿದ್ದ ರಿಷಿಕೇಷ್, ತಾನು ಹೇಳಿದವರನ್ನು ಸಹ ನಿರ್ಮಾಪಕರನ್ನಾಗಿ ಸೇರಿಸಿಕೊಳ್ಳಬೇಕು. ಇಲ್ಲವಾದಲ್ಲಿ ಶೂಟ್ ಮಾಡಿರುವ ಹಾರ್ಡ್ ಡಿಸ್ಕ್ ಕೂಡ ಕೊಡುವುದಿಲ್ಲ ಎಂದಿದ್ದ. ಸುಮಾರು ಹತ್ತು ತಿಂಗಳಿನಿಂದ ಹಾರ್ಡ್ ಡಿಸ್ಕ್ ಕೊಡದೇ, ಕರೆ ಮಾಡಿ ವಿಚಾರಿಸಿದರೆ ನಿರ್ಮಾಪಕರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕುತ್ತಿದ್ದಾನೆ ಎಂದು ಛಾಯಗ್ರಾಹಕ ರಿಶಿಕೇಷ್ ವಿರುದ್ಧ ಆರೋಪ ಮಾಡಲಾಗಿದೆ. ಈ ಬಗ್ಗೆ ನಿರ್ಮಾಪಕಿ ರಾಜಲಕ್ಷ್ಮಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ