Breaking News

ಹೃದಯಾಘಾತದಿಂದ ಹೆಡ್ ಕಾನ್​ಸ್ಟೇಬಲ್ ನಿಧನ

Spread the love

ವಿಜಯನಗರ: ತಾಲೂಕಿನ ಕಮಲಾಪುರದ ಪೊಲೀಸ್ ಠಾಣೆಯ ಹೆಡ್​ ಕಾನ್​ಸ್ಟೇಬಲ್​ ರಾಘವೇಂದ್ರ ಅವರು ಹೊಸಪೇಟೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತ ರಾಘವೇಂದ್ರ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮನೆಯ ಆಧಾರಸ್ತಂಭವನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

ರಾಘವೇಂದ್ರ ಅವರು 2005ರಲ್ಲಿ ಕಾನ್​ಸ್ಟೇಬಲ್ ಆಗಿ ನೇಮಕವಾಗಿದ್ದರು. ಕಳೆದ 18 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಇತ್ತೀಚಿಗಷ್ಟೇ ಬಳ್ಳಾರಿಯ ಲೋಕಾಯುಕ್ತ ಕಚೇರಿಯಿಂದ ಕಮಲಾಪುರ ಠಾಣೆಗೆ ವರ್ಗಾವಣೆ ಆಗಿದ್ದರು. ಹೆಡ್ ಕಾನ್​ಸ್ಟೇಬಲ್ ಆಗಿ ಬಡ್ತಿ ಪಡೆದು ಸೇವೆ ಸಲ್ಲಿಸುತ್ತಿದ್ದರು.

ವಿಜಯನಗರದ ಪೊಲೀಸ್​ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್, ಡಿವೈಎಸ್​ಪಿ ಮಂಜುನಾಥ್ ತಳವಾರ್, ಹಂಪಿ ಸಿಪಿಐ ಕೆ. ಶಿವರಾಜ್ ಅವರು ರಾಘವೇಂದ್ರ ಅವರ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

 


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ