Breaking News

ಹೃದಯಾಘಾತದಿಂದ ಹೆಡ್ ಕಾನ್​ಸ್ಟೇಬಲ್ ನಿಧನ

Spread the love

ವಿಜಯನಗರ: ತಾಲೂಕಿನ ಕಮಲಾಪುರದ ಪೊಲೀಸ್ ಠಾಣೆಯ ಹೆಡ್​ ಕಾನ್​ಸ್ಟೇಬಲ್​ ರಾಘವೇಂದ್ರ ಅವರು ಹೊಸಪೇಟೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತ ರಾಘವೇಂದ್ರ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮನೆಯ ಆಧಾರಸ್ತಂಭವನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

ರಾಘವೇಂದ್ರ ಅವರು 2005ರಲ್ಲಿ ಕಾನ್​ಸ್ಟೇಬಲ್ ಆಗಿ ನೇಮಕವಾಗಿದ್ದರು. ಕಳೆದ 18 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಇತ್ತೀಚಿಗಷ್ಟೇ ಬಳ್ಳಾರಿಯ ಲೋಕಾಯುಕ್ತ ಕಚೇರಿಯಿಂದ ಕಮಲಾಪುರ ಠಾಣೆಗೆ ವರ್ಗಾವಣೆ ಆಗಿದ್ದರು. ಹೆಡ್ ಕಾನ್​ಸ್ಟೇಬಲ್ ಆಗಿ ಬಡ್ತಿ ಪಡೆದು ಸೇವೆ ಸಲ್ಲಿಸುತ್ತಿದ್ದರು.

ವಿಜಯನಗರದ ಪೊಲೀಸ್​ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್, ಡಿವೈಎಸ್​ಪಿ ಮಂಜುನಾಥ್ ತಳವಾರ್, ಹಂಪಿ ಸಿಪಿಐ ಕೆ. ಶಿವರಾಜ್ ಅವರು ರಾಘವೇಂದ್ರ ಅವರ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ