Breaking News

ಚಾಮರಾಜನಗರ: ಕಾಡು ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಚಾಮರಾಜನಗರ: ಕಾಡು ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಜಾನ್ ಜೋನಸ್, ಜಾನ್ ಬೋಸ್ಕೊ, ಅಂಥೋಣಿ ಆನಂದ್ ಕುಮಾರ್, ಸೈಮನ್ ಸ್ಟಾಲಿನ್, ಭಾಗ್ಯರಾಜ್, ಅಂತೋಣಿ ರಾಜ್ ಹಾಗೂ ಸೇಸುರಾಜ್ ಎಂದು ಗುರುತಿಸಲಾಗಿದ್ದು, ಇವರನ್ನು ಚಾಮರಾಜನಗರ ಜಿಲ್ಕೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಕರಚಿಕಟ್ವೆ ಬಳಿ ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ 7 ನಾಡ ಬಂದೂಕು ಹಾಗೂ ಸಿಡಿಮದ್ದುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಈ ಭರ್ಜರಿ ಕಾರ್ಯಾಚರಣೆ ಮಾಡಿ ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ 7 ಮಂದಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನದ ವಶಕ್ಕೆ ನೀಡಲಾಗಿದೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ