ಶಿಕ್ಷಣ ಸಚಿವರನ್ನು ಚಿಕ್ಕೋಡಿಗೆ ಕರೆಯಿಸಿ ಶಿಕ್ಷಣ ಇಲಾಖೆಯ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.
ಚಿಕ್ಕೋಡಿ ಪಟ್ಟಣದ ಪರಟಿನಾಗಲಿಂಗೇಶ್ವರ ಸಭಾಭವನದಲ್ಲಿ ಆಯೋಜಿಸಿದ ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡುತ್ತಾ ತಂದೆ ತಾಯಿಯವರ ನಂತರ ಶಿಕ್ಷಕರೇ ಗುರುಗಳು,ಶಿಕ್ಷಕರನ್ನು ದೇವರಂತೆ ಕಾಣಬೇಕು.ಶಿಕ್ಷಕರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ಯಶಸ್ಸು ಕಂಡಿತ ಎಂದರು.
ಜಿಲ್ಲೆಯ ಎಲ್ಲ ಸಮಸ್ಯೆಗಳನ್ನು ನಾನು ಹಾಗೂ ದೆಹಲಿ ಪ್ರತಿನಿಧಿ ಪ್ರಕಾಶ ಹುಕ್ಕೇರಿಯವರು ಬಗೆಹರಿಸುತ್ತೇವೆ.ಮುಂದಿನ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗಿಯಾಗಬೇಕು ಎಂದರು ಹಾಗೂ ವಿಧಾನಪರಿಷತ ಸದಸ್ಯ,
ದೆಹಲಿ ಪ್ರತಿನಿಧಿ ಪ್ರಕಾಶ ಹುಕ್ಕೇರಿಯವರು ಸ್ವಂತ ಖರ್ಚಿನಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 30 ಶಾಲೆಗಳಿಗೆ ಲ್ಯಾಪ್ಟಾಪ್ ಹಾಗೂ ಕಲರ್ ಮಿಷನ್ ಗಳನ್ನು ನೀಡಿದ್ದಾರೆ ಎಂದರು.
ಬಳಿಕ ದೆಹಲಿ ಪ್ರತಿನಿಧಿ,ವಿಧಾನಪರಿಷತ ಸದಸ್ಯ ಪ್ರಕಾಶ ಹುಕ್ಕೇರಿಯವರು ತಮ್ಮ ಸ್ವಂತ ಖರ್ಚಿನಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸುಮಾರು 30 ಶಾಲೆಗಳಿಗೆ ಲ್ಯಾಪಟಾಪ್ ಹಾಗೂ ಕಲರ್ ಪ್ರಿಂಟಗಳನ್ನು ಶಾಸಕ ಗಣೇಶ ವಿತರಿಸಿದರು.