Breaking News

ನೀರಜ್​ ಚೋಪ್ರಾ ಪ್ರತಿಮೆಯಲ್ಲಿದ್ದ ಜಾವೆಲಿನ್​ ಕಳ್ಳತನ.. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸರ ವ್ಯಕ್ತಪಡಿಸಿ ಸಾರ್ವಜನಿಕರು

Spread the love

ಮೀರತ್ (ಉತ್ತರ ಪ್ರದೇಶ): ಸ್ಟಾರ್ ಜಾವೆಲಿನ್ ಥ್ರೋವರ್ ಮತ್ತು ಒಲಿಂಪಿಕ್ ಚಾಂಪಿಯನ್‌, ಇತ್ತಿಚೆಗೆ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನಲ್ಲಿ ಚಿನ್ನ ಗೆದ್ದ ನೀರಜ್​ ಚೋಪ್ರಾ ಅವರ ಪ್ರತಿಮೆಯನ್ನು ಇಲ್ಲಿನ ಹಾಪುರ್​ನ ಸರ್ಕಲ್ ಸ್ಥಾಪಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಈ ಪ್ರತಿಮೆಯ ಕೈಯಲ್ಲಿದ್ದ ಜಾವೆಲಿನ್ ಬದಲಾಗಿತ್ತು. ಮೂರ್ತಿ ಸ್ಥಾಪಿಸಿದಾಗ ಫೈಬರ್​ನಿಂದ ಮಾಡಿದ ಜಾವೆಲಿನ್ ಇಡಲಾಗಿತ್ತು. ಈಗ ಆ ಜಾಗದಲ್ಲಿ ಕಿಡಿಗೇಡಿಗಳು ಮರದ ಕೋಲನ್ನು ಇಟ್ಟಿದ್ದಾರೆ. ಈ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೇ ಈ ಬಗ್ಗೆ ಕೇಳಿದರೆ ಅದು ನಗರ ಸಭೆಗೆ ಸೇರಿದ ವಿಚಾರ ಎಂದು ವಿಷಯವನ್ನು ತಳ್ಳಿ ಹಾಕುತ್ತಿದ್ದಾರೆ.

ಸ್ಪೋರ್ಟ್ಸ್ ಸಿಟಿಯ ಪ್ರಚಾರಕ್ಕಾಗಿ ನೀರಜ್ ಚೋಪ್ರಾ ಅವರ ಪ್ರತಿಮೆಗಳನ್ನು ನಗರದ ಅನೇಕ ಭಾಗಗಳಲ್ಲಿ ಸ್ಥಾಪಿಸಲಾಗಿದೆ. ಹಾಪುರ್​ದಲ್ಲಿ ರಸ್ತೆಯ ಸರ್ಕಲ್​ ಒಂದರಲ್ಲಿ ವಿವಿಧ ಭಂಗಿಗಳಲ್ಲಿ ನೀರಜ್​ ಅವರ ನಾಲ್ಕು ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ. ಇವುಗಳಲ್ಲಿ ಒಂದು ಪ್ರತಿಮೆಯ ಕೈಯಲ್ಲಿ ಫೈಬರ್ ಜಾವೆಲಿನ್ ಅನ್ನು ಹೊಂದಿತ್ತು. ಆದರೆ, ಇಂದು ಆ ಪ್ರತಿಮೆಯ ಕೈಯಲ್ಲಿ ಫೈಬರ್​ ಜಾವೆಲಿನ್ ಬದಲಿಗೆ ಮರದ ಕೋಲು ಇಡಲಾಗಿತ್ತು. ಇದರಿಂದಾಗಿ ನಗರದಲ್ಲಿ ಜಾವೆಲಿನ್ ಕಳ್ಳತನದ ಬಗ್ಗೆ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದ ಸಾರ್ವಜನಿಕರು ಪೊಲೀಸರ ಮೇಲೆ ಬೇಸರ ವ್ಯಕ್ತಪಡಿಸಿದ್ದಾರೆ. ಜಾವೆಲಿನ್​ ಕಳ್ಳತಕ್ಕೆ ಪೊಲೀಸರ ಭದ್ರತಾ ವ್ಯವಸ್ಥೆಯ ಲೋಪವೇ ಕಾರಣ ಎಂದು ಜನ ಸಾಮಾನ್ಯರು ದೂರುತ್ತಿದ್ದಾರೆ.

ಎಂಡಿಎ ಸ್ಪಷ್ಟನೆ: ಮೀರತ್ ಅಭಿವೃದ್ಧಿ ಪ್ರಾಧಿಕಾರ ಈ ವಿಚಾರದಲ್ಲಿ ಸ್ಪಷ್ಟನೆ ನೀಡಿದೆ. ವಿಶ್ವ ಚಾಂಪಿಯನ್ ನೀರಜ್ ಚೋಪ್ರಾ ಅವರ ಪ್ರತಿಮೆಯಿಂದ ಜಾವೆಲಿನ್​ ಕಳ್ಳತನವಾಗಿದೆ ಎಂಬ ಸುದ್ದಿ ಸರಿಯಲ್ಲ ಎಂದು ಹೇಳಲಾಗಿದೆ. ಹಿಂದೆ ಬಳಸಿದ ಜಾವೆಲಿನ್​ ಈಗಲೂ ಇದೆ. ಅದನ್ನು ಕದ್ದಿಲ್ಲ ಅಥವಾ ಯಾವುದೇ ರೀತಿಯಲ್ಲಿ ಹಾನಿ ಮಾಡಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಪ್ರತಿಮೆಯ ಹಿಂದಿನ ಚಿತ್ರದಲ್ಲಿ ದೊಡ್ಡ ಜಾವೆಲಿನ್​ ಇತ್ತು, ಆದರೆ ಈಗ ಈಟಿ ತುಂಬಾ ಚಿಕ್ಕದಾಗಿದೆ. ಈ ಜಾವೆಲಿನ್ ಮರದ ಕೋಲಿನಂತೆ ಕಾಣುತ್ತದೆ ಎಂದು ಎಂಡಿಎ ಕಾರ್ಯನಿರ್ವಾಹಕ ಇಂಜಿನಿಯರ್ ಸ್ಪಷ್ಟನೆಯ ನಂತರವೂ ಸ್ಥಳೀಯರು ಈ ಆರೋಪ ಮಾಡಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ