Breaking News
Home / ರಾಜಕೀಯ / ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಜೆಡಿಎಸ್​ನೊಂದಿಗೆ ಮೈತ್ರಿ ಅಗತ್ಯ: ಸಿ ಪಿ ಯೋಗೇಶ್ವರ್

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಜೆಡಿಎಸ್​ನೊಂದಿಗೆ ಮೈತ್ರಿ ಅಗತ್ಯ: ಸಿ ಪಿ ಯೋಗೇಶ್ವರ್

Spread the love

ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಜೆಡಿಎಸ್​ನೊಂದಿಗೆ ಮೈತ್ರಿ ಅಗತ್ಯವಿದೆ ಎಂದು ಮಾಜಿ ಸಚಿವ ಸಿ.ಪಿ.

ಯೋಗೇಶ್ವರ್ ಪ್ರತಿಪಾದಿಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್​ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡರೆ 25 ಸ್ಥಾನಗಳನ್ನು ಗೆಲ್ಲಬಹುದು ಎನ್ನುವುದು ನನ್ನ ವೈಯುಕ್ತಿಕ ಅಭಿಪ್ರಾಯ. ಆದರೆ, ಇದರ ಬಗ್ಗೆ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ಅಲ್ಲದೇ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು, ನಮ್ಮ ಪಕ್ಷದ ಯಾರೇ ಅಭ್ಯರ್ಥಿ ಆದರೂ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಹೇಳಿದರು.

ಅವರಿಬ್ಬರು ವ್ಯಾಪಾರದ ಸ್ನೇಹಿತರು: ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ರಾಜ್ಯದ ಡಿಸಿಎಂ ಡಿ ಕೆ ಶಿವಕುಮಾರ್ ಇಬ್ಬರೂ ಸ್ನೇಹಿತರು. ಇಂಡಿಯಾ ಮೈತ್ರಿ ಕೂಟದ ಅಂಗ ಪಕ್ಷದವರು ಕೂಡಾ. ಇಬ್ಬರ ನಡುವೆ ವ್ಯಾಪಾರ ಸಂಬಂಧ ಇದೆ. ಆದ್ದರಿಂದ ಡಿ.ಕೆ.ಶಿವಕುಮಾರ್ ಇಲ್ಲಿ ಡ್ರಾಮಾ ಮಾಡುತ್ತಿದ್ದಾರೆ. ಇವರಿಂದ ಜಿಲ್ಲೆ ಮತ್ತು ರಾಜ್ಯದ ಅಭಿವೃದ್ಧಿ ನಿರೀಕ್ಷಿಲು ಸಾಧ್ಯವೇ, ರಾಜ್ಯದ ಕಾಳಜಿ ಇದ್ದಿದ್ದರೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರಲಿಲ್ಲ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ