Breaking News

ಸಿಎಂ ವಿರುದ್ಧ ಟೀಕೆ‌ ಮಾಡಿರುವುದರಿಂದ ಎಂಎಲ್​ಸಿ ಬಿ ಕೆ ಹರಿಪ್ರಸಾದ್ ಅವರಿಗೆ ಡ್ಯಾಮೇಜ್ ಆಗಲಿದೆ:ದಿನೇಶ್ ಗುಂಡೂರಾವ್

Spread the love

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕೆ‌ ಮಾಡಿರುವುದರಿಂದ ಎಂಎಲ್​ಸಿ ಬಿ ಕೆ ಹರಿಪ್ರಸಾದ್ ಅವರಿಗೆ ಡ್ಯಾಮೇಜ್ ಆಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಅವರು ಯಾರ ಬಗ್ಗೆ ಟೀಕೆ ಮಾಡ್ತಾರೆ, ಯಾಕೆ ಮಾಡ್ತಾರೆ ಅರ್ಥವಾಗ್ತಿಲ್ಲ. ಅವರು ಟೀಕೆ ಮಾಡಿದ ವೇದಿಕೆಯಲ್ಲಿ ಎಲ್ಲ ಪಕ್ಷದ ಮುಖಂಡರುಗಳಿದ್ದರು. ಈಗಾಗಲೇ ಹೈಕಮಾಂಡ್ ಅವರಿಗೆ ಏನೂ ಮಾತನಾಡಬೇಡಿ ಎಂದು ಹೇಳಿದೆ. ಆದರೆ ಅವರು ಒಬ್ಬ ರಾಜಕಾರಣಿಯಾಗಿ ಆ ರೀತಿ ಮಾತನಾಡುವುದು ಸರಿಯಲ್ಲ ಎಂದರು.

ಅಸಮಾಧಾನ ಯಾಕೆ ಗೊತ್ತಿಲ್ಲ. ಪಕ್ಷದಲ್ಲಿ ಸ್ಥಾನ ದೊರಕುತ್ತದೆ, ಹೋಗುತ್ತದೆ. ಆದರೆ ಪ್ರಬುದ್ಧ ರಾಜಕಾರಣಿಯಾಗಿ ಒಂದು ಸಾರ್ವಜನಿಕ ವೇದಿಕೆಯಲ್ಲಿ ಆ ರೀತಿ ಮಾತನಾಡಬಾರದು. ಇದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಅವರಿಗೇ ಡ್ಯಾಮೇಜ್ ಆಗುತ್ತದೆ. ನಮ್ಮ ಪಕ್ಷ ಬೇಧಬಾವ ಮಾಡಿಲ್ಲ, ಅಂಥದ್ದೂ ಮಾಡಿಯೂ ಇಲ್ಲ ಎಂದು ದಿನೇಶ್​ ಗುಂಡೂರಾವ್​.

ಮಂಗಳೂರು ವಿಶ್ವವಿದ್ಯಾಲಯಯದಲ್ಲಿ ಗಣೇಶೋತ್ಸವ ವಿವಾದದ ವಿಚಾರದಲ್ಲಿ ಮಾತನಾಡಿದ ಸಚಿವರು, ಮಂಗಳೂರು ವಿವಿ ಬಿ ದರ್ಜೆಗೆ ಇಳಿದಿದ್ದು, ಅದನ್ನು ಹೇಗೆ ಎ ದರ್ಜೆಗೆ ಏರಿಸುವುದು ಎಂಬುದರ ಬಗ್ಗೆ ಚಿಂತನೆ ಮಾಡಬೇಕು. ಗಣೇಶೋತ್ಸವ ನಡೆಸುವ ವಿಚಾರದಲ್ಲಿ ವಿವಿ ಮಟ್ಟದಲ್ಲಿ, ಕುಲಪತಿಗಳು ತೀರ್ಮಾನ ಮಾಡುತ್ತಾರೆ. ಹೊರಗಿನವರು ಅದರಲ್ಲಿ ಹಸ್ತಕ್ಷೇಪ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡುತ್ತೇನೆ. ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡುತ್ತಾರೆ, ಇನ್ನೊಬ್ಬ ಏನು ಮಾಡುತ್ತಾರೆ ಎಂಬುದು ನಮಗೇನು ಸಂಬಂಧ. ಮಂಗಳೂರು ವಿವಿ ಪರಿಣಾಮಕಾರಿಯಾಗಿ, ಶೈಕ್ಷಣಿಕವಾಗಿ ಬೆಳೆಯಬೇಕು. ಅದರ ಬಗ್ಗೆ ಮಾತ್ರ ಚರ್ಚೆ ಮಾಡಿದರೆ ಉತ್ತಮ ಎಂದು ಹೇಳಿದರು.


Spread the love

About Laxminews 24x7

Check Also

ಮಕ್ಕಳ ವಾರದ ಸಂತೆ,ಪುಟಾಣಿಗಳ ಕೈಯಲ್ಲಿ ಸಾವಿರಾರು ರೂ. ವ್ಯಾಪಾರ, ಪೋಷಕರು ಫಿದಾ!

Spread the love  ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯು ಆಯೋಜಿಸಿದ್ದ ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ